2:32 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕಾರ್ಕಳ: ಡಿಸೆಂಬರ್ 12 ಹಿಂದೂ ಸಂಗಮ  ಹಾಗೂ ಬೃಹತ್ ಶೋಭಾಯಾತ್ರೆ

04/12/2021, 16:31

ಕಾರ್ಕಳ(reporterkarnataka.com):
ಕಾರ್ಕಳದ ಗಾಂಧಿ ಮೈದಾನದಲ್ಲಿ  ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸುನೀಲ್ ಕೆ.ಆರ್. ತಿಳಿಸಿದರು. 

ಕಾರ್ಕಳದ ಹಿಂದೂ ಸಂಗಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತಜಯಂತಿಯ ಅಂಗವಾಗಿ ಡಿ.12ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಹಿಂದೂ ಸಂಗಮದಲ್ಲಿ ಸುಮಾರು 25ಸಾವಿರ ಮಂದಿ ಹಿಂದೂ ಬಾಂಧವರು ಸೇರುವ ನಿರೀಕ್ಷೆಯಿದೆ. ಸ್ವರಾಜ್ಯ ಮೈದಾನದಿಂದ ಗಾಂಧಿ ಮೈದಾನದವರೆಗೆ ಭಜನಾ ತಂಡ, ವಿವಿಧ ಟ್ಯಾಬ್ಲೋಗಳೊಂದಿಗೆ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಹೇಳಿದರು

ಸಭೆಯನ್ನು ಉದ್ದೇಶಿಸಿ ಸಾಧ್ವಿ ಸರಸ್ವತಿ ದಿಕ್ಸೂಚಿ ಭಾಷಣ ಮಾಡಲಿದ್ದು, ಪೇಜಾವರ ಸ್ವಾಮೀಜಿಯವರು ಹಾಗೂ ಆನೆಗುಂದಿ ಮಹಾಸಂಸ್ಥಾನದ ಕಾಳ ಹಸ್ತೇಂದ್ರ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್  ಅಧ್ಯಕ್ಷತೆ ವಹಿಸಿಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಮತ್ತು ಜಾಗೃತಿಗಾಗಿ,  ಪೂರ್ವಭಾವಿಯಾಗಿ ಧರ್ಮರಕ್ಷ ರಥ ತಾಲೂಕಿನಾದ್ಯಂತ ಗ್ರಾಮ ಗ್ರಾಮಗಳಿಗೆ ಸಂಚರಿಸುತ್ತಿದ್ದು, ಡಿ 5ರಂದು ಕಾರ್ಕಳ ನಗರಕ್ಕೆ ಪ್ರವೇಶ ಮಾಡಲಿದೆ ಎಂದು ಸುನಿಲ್ ಕೆ.ಆರ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಹಿಂದೂ ಭಾಂಧವರು ಭಾಗವಹಿಸಿ ಹಿಂದೂ ಸಮಾಜದಲ್ಲಿ ವಿಶ್ವಾಸವನ್ನು ತುಂಬಿಸುವ ಕೆಲಸ ಮತ್ತು ಜಾಗೃತ, ಸ್ವಾಭಿಮಾನ ಹಿಂದೂ ಸಮಾಜದ ನಿರ್ಮಾಣವಾಗುವಂತಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭಾಸ್ಕರ ಕೋಟ್ಯಾನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ತಾಲೂಕು ಕಾರ್ಯದರ್ಶಿ ಸುಧೀರ್ ನಿಟ್ಟೆ, ಕಾರ್ಕಳ ಬಜರಂಗದಳ ಸಂಚಾಲಕ ಚೇತನ್ ಪೇರಾಲ್ಕೆ, ವಿ.ಹಿಂ.ಪ. ಜಿಲ್ಲಾ ಉಪಾಧ್ಯಕ್ಷ ಅಶೋಕ್ ಪಾಲಡ್ಕ, ಹರಿಪ್ರಸಾದ್ ಶೆಟ್ಟಿ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು