1:27 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಕಾರ್ಕಳ: ಡಿಸೆಂಬರ್ 12 ಹಿಂದೂ ಸಂಗಮ  ಹಾಗೂ ಬೃಹತ್ ಶೋಭಾಯಾತ್ರೆ

04/12/2021, 16:31

ಕಾರ್ಕಳ(reporterkarnataka.com):
ಕಾರ್ಕಳದ ಗಾಂಧಿ ಮೈದಾನದಲ್ಲಿ  ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸುನೀಲ್ ಕೆ.ಆರ್. ತಿಳಿಸಿದರು. 

ಕಾರ್ಕಳದ ಹಿಂದೂ ಸಂಗಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತಜಯಂತಿಯ ಅಂಗವಾಗಿ ಡಿ.12ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಹಿಂದೂ ಸಂಗಮದಲ್ಲಿ ಸುಮಾರು 25ಸಾವಿರ ಮಂದಿ ಹಿಂದೂ ಬಾಂಧವರು ಸೇರುವ ನಿರೀಕ್ಷೆಯಿದೆ. ಸ್ವರಾಜ್ಯ ಮೈದಾನದಿಂದ ಗಾಂಧಿ ಮೈದಾನದವರೆಗೆ ಭಜನಾ ತಂಡ, ವಿವಿಧ ಟ್ಯಾಬ್ಲೋಗಳೊಂದಿಗೆ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಹೇಳಿದರು

ಸಭೆಯನ್ನು ಉದ್ದೇಶಿಸಿ ಸಾಧ್ವಿ ಸರಸ್ವತಿ ದಿಕ್ಸೂಚಿ ಭಾಷಣ ಮಾಡಲಿದ್ದು, ಪೇಜಾವರ ಸ್ವಾಮೀಜಿಯವರು ಹಾಗೂ ಆನೆಗುಂದಿ ಮಹಾಸಂಸ್ಥಾನದ ಕಾಳ ಹಸ್ತೇಂದ್ರ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್  ಅಧ್ಯಕ್ಷತೆ ವಹಿಸಿಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಮತ್ತು ಜಾಗೃತಿಗಾಗಿ,  ಪೂರ್ವಭಾವಿಯಾಗಿ ಧರ್ಮರಕ್ಷ ರಥ ತಾಲೂಕಿನಾದ್ಯಂತ ಗ್ರಾಮ ಗ್ರಾಮಗಳಿಗೆ ಸಂಚರಿಸುತ್ತಿದ್ದು, ಡಿ 5ರಂದು ಕಾರ್ಕಳ ನಗರಕ್ಕೆ ಪ್ರವೇಶ ಮಾಡಲಿದೆ ಎಂದು ಸುನಿಲ್ ಕೆ.ಆರ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಹಿಂದೂ ಭಾಂಧವರು ಭಾಗವಹಿಸಿ ಹಿಂದೂ ಸಮಾಜದಲ್ಲಿ ವಿಶ್ವಾಸವನ್ನು ತುಂಬಿಸುವ ಕೆಲಸ ಮತ್ತು ಜಾಗೃತ, ಸ್ವಾಭಿಮಾನ ಹಿಂದೂ ಸಮಾಜದ ನಿರ್ಮಾಣವಾಗುವಂತಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭಾಸ್ಕರ ಕೋಟ್ಯಾನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ತಾಲೂಕು ಕಾರ್ಯದರ್ಶಿ ಸುಧೀರ್ ನಿಟ್ಟೆ, ಕಾರ್ಕಳ ಬಜರಂಗದಳ ಸಂಚಾಲಕ ಚೇತನ್ ಪೇರಾಲ್ಕೆ, ವಿ.ಹಿಂ.ಪ. ಜಿಲ್ಲಾ ಉಪಾಧ್ಯಕ್ಷ ಅಶೋಕ್ ಪಾಲಡ್ಕ, ಹರಿಪ್ರಸಾದ್ ಶೆಟ್ಟಿ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು