3:51 PM Saturday5 - July 2025
ಬ್ರೇಕಿಂಗ್ ನ್ಯೂಸ್
ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;…

ಇತ್ತೀಚಿನ ಸುದ್ದಿ

ಕಾರ್ಕಳ: ಡಿಸೆಂಬರ್ 12 ಹಿಂದೂ ಸಂಗಮ  ಹಾಗೂ ಬೃಹತ್ ಶೋಭಾಯಾತ್ರೆ

04/12/2021, 16:31

ಕಾರ್ಕಳ(reporterkarnataka.com):
ಕಾರ್ಕಳದ ಗಾಂಧಿ ಮೈದಾನದಲ್ಲಿ  ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸುನೀಲ್ ಕೆ.ಆರ್. ತಿಳಿಸಿದರು. 

ಕಾರ್ಕಳದ ಹಿಂದೂ ಸಂಗಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತಜಯಂತಿಯ ಅಂಗವಾಗಿ ಡಿ.12ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಹಿಂದೂ ಸಂಗಮದಲ್ಲಿ ಸುಮಾರು 25ಸಾವಿರ ಮಂದಿ ಹಿಂದೂ ಬಾಂಧವರು ಸೇರುವ ನಿರೀಕ್ಷೆಯಿದೆ. ಸ್ವರಾಜ್ಯ ಮೈದಾನದಿಂದ ಗಾಂಧಿ ಮೈದಾನದವರೆಗೆ ಭಜನಾ ತಂಡ, ವಿವಿಧ ಟ್ಯಾಬ್ಲೋಗಳೊಂದಿಗೆ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಹೇಳಿದರು

ಸಭೆಯನ್ನು ಉದ್ದೇಶಿಸಿ ಸಾಧ್ವಿ ಸರಸ್ವತಿ ದಿಕ್ಸೂಚಿ ಭಾಷಣ ಮಾಡಲಿದ್ದು, ಪೇಜಾವರ ಸ್ವಾಮೀಜಿಯವರು ಹಾಗೂ ಆನೆಗುಂದಿ ಮಹಾಸಂಸ್ಥಾನದ ಕಾಳ ಹಸ್ತೇಂದ್ರ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್  ಅಧ್ಯಕ್ಷತೆ ವಹಿಸಿಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಮತ್ತು ಜಾಗೃತಿಗಾಗಿ,  ಪೂರ್ವಭಾವಿಯಾಗಿ ಧರ್ಮರಕ್ಷ ರಥ ತಾಲೂಕಿನಾದ್ಯಂತ ಗ್ರಾಮ ಗ್ರಾಮಗಳಿಗೆ ಸಂಚರಿಸುತ್ತಿದ್ದು, ಡಿ 5ರಂದು ಕಾರ್ಕಳ ನಗರಕ್ಕೆ ಪ್ರವೇಶ ಮಾಡಲಿದೆ ಎಂದು ಸುನಿಲ್ ಕೆ.ಆರ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಹಿಂದೂ ಭಾಂಧವರು ಭಾಗವಹಿಸಿ ಹಿಂದೂ ಸಮಾಜದಲ್ಲಿ ವಿಶ್ವಾಸವನ್ನು ತುಂಬಿಸುವ ಕೆಲಸ ಮತ್ತು ಜಾಗೃತ, ಸ್ವಾಭಿಮಾನ ಹಿಂದೂ ಸಮಾಜದ ನಿರ್ಮಾಣವಾಗುವಂತಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭಾಸ್ಕರ ಕೋಟ್ಯಾನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ತಾಲೂಕು ಕಾರ್ಯದರ್ಶಿ ಸುಧೀರ್ ನಿಟ್ಟೆ, ಕಾರ್ಕಳ ಬಜರಂಗದಳ ಸಂಚಾಲಕ ಚೇತನ್ ಪೇರಾಲ್ಕೆ, ವಿ.ಹಿಂ.ಪ. ಜಿಲ್ಲಾ ಉಪಾಧ್ಯಕ್ಷ ಅಶೋಕ್ ಪಾಲಡ್ಕ, ಹರಿಪ್ರಸಾದ್ ಶೆಟ್ಟಿ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು