2:40 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ನಂದಿನಿ ಗ್ರಾಹಕರಿಗೆ ಉಚಿತ ಹೆಚ್ಚುವರಿ ಹಾಲು: ಇಂದಿನಿಂದ ತಿಂಗಳಾಂತ್ಯ ವರೆಗೆ ಸಿಗಲಿದೆ ಸೌಲಭ್ಯ 

01/06/2021, 06:59

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಂದಿನಿಯು ಜೂ.1ರಿಂದ 30ರವರೆಗೆ ತನ್ನ ಗ್ರಾಹಕರಿಗೆ ಹೆಚ್ಚುವರಿ ಹಾಲು ಉಚಿತವಾಗಿ ನೀಡಲಿದೆ.

ಎಲ್ಲ ಮಾದರಿಯ ನಂದಿನಿ 500 ಮಿ.ಲೀ. ಮೇಲೆ ತಲಾ 20 ಮಿ.ಲೀ. ಹಾಗೂ 1 ಲೀಟರ್ ಹಾಲಿನ ಪೊಟ್ಟಣಗಳ ಮೇಲೆ ತಲಾ 

40ಮಿ.ಲೀ. ಹಾಲನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಿದೆ.  ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಈ ವಿಷಯವನ್ನು

ತಿಳಿಸಿದ್ದಾರೆ.

ಲಾಕ್‌ಡೌನ್ ಪರಿಣಾಮ ಶುಭ ಸಮಾರಂಭ, ದೇವಸ್ಥಾನ, ವಿದ್ಯಾಸಂಸ್ಥೆಗಳ ಹಾಸ್ಟೆಲ್, ಹೊಟೇಲ್‌ಗಳಿಗೆ ಬಂದ್ ಆಗಿರುವುದರಿಂದ  ಹಾಲು ಮತ್ತು ಮೊಸರುಗಳ ಮಾರಾಟದಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ರಾಜ್ಯಾದ್ಯಂತ ಕೊರೊನಾ ಸೋಂಕಿನ ಎರಡನೇ ಅಲೆಯು ತೀವ್ರವಾಗಿದ್ದು, ಇದರಿಂದ ಕಳೆದ ಎ.28ರಿಂದ ರಾಜ್ಯಾದ್ಯಂತ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಹೆಚ್ಚಳ ಸಾಧ್ಯವಾಗುತ್ತಿಲ್ಲ ಎಂದವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು