7:42 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಯೇನಪೋಯ ಹಾಸ್ಟೆಲ್ ವಿದ್ಯಾರ್ಥಿಗಳ ಮಾರಾಮಾರಿ ಪ್ರಕರಣ: ಬಂಧಿತ 8 ಮಂದಿಯಲ್ಲಿ ನಾಲ್ವರು ಡ್ರಗ್ಸ್ ಸೇವನೆ

04/12/2021, 18:01

ಮಂಗಳೂರು(reporterkarnataka.com): ಗುಜ್ಜರಕೆರೆ ಸಮೀಪದ ಯೇನಪೋಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ 8 ಮಂದಿ ವಿದ್ಯಾರ್ಥಿಗಳ ಪೈಕಿ ನಾಲ್ವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ.

ಮೊಹಮ್ಮದ್‌, ವಿಮಲ್‌, ಫಹಾದ್‌‌ ಮುನಾಫ್‌‌‌, ಶಾಹೀದ್‌‌‌, ಕಾನೆ ಜಾನ್ಸನ್‌‌, ಆದರ್ಶ್‌‌, ಮೊಹಮ್ಮದ್‌ ನಾಸೀಫ್‌‌, ತಾಹೀರ್‌ ಬಂಧಿತ 8 ಮಂದಿ ವಿದ್ಯಾರ್ಥಿಗಳಾಗಿದ್ದಾರೆ. ಅವರ  ಪೈಕಿ ನಾಲ್ವರು ಡ್ರಗ್ಸ್‌‌ ಸೇವಿಸಿರುವುದು ತಿಳಿದು ಬಂದಿದೆ.

ಡಿ. 2ರಂದು ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಘರ್ಷಣೆ ನಡೆದಿತ್ತು. ಯೇನಪೋಯ  ಹಾಸ್ಟೆಲ್‌‌ ಬಳಿಯಲ್ಲಿ ಆದರ್ಶ್‌ ಪ್ರೇಮ್‌ ಕುಮಾರ್‌ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಾಗ ಸಿನಾನ್ ಮತ್ತು ಅದೇ ಕಾಲೇಜಿನ ಇತರ 8 ಮಂದಿ ವಿದ್ಯಾರ್ಥಿಗಳು ಇಂಟರ್ಲಾಕ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಆದರ್ಶ್ ಹಾಗೂ ಮೊಹಮ್ಮದ್ ನಾಸಿಫ್ ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು