6:52 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಯೇನಪೋಯ ಹಾಸ್ಟೆಲ್ ವಿದ್ಯಾರ್ಥಿಗಳ ಮಾರಾಮಾರಿ ಪ್ರಕರಣ: ಬಂಧಿತ 8 ಮಂದಿಯಲ್ಲಿ ನಾಲ್ವರು ಡ್ರಗ್ಸ್ ಸೇವನೆ

04/12/2021, 18:01

ಮಂಗಳೂರು(reporterkarnataka.com): ಗುಜ್ಜರಕೆರೆ ಸಮೀಪದ ಯೇನಪೋಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ 8 ಮಂದಿ ವಿದ್ಯಾರ್ಥಿಗಳ ಪೈಕಿ ನಾಲ್ವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ.

ಮೊಹಮ್ಮದ್‌, ವಿಮಲ್‌, ಫಹಾದ್‌‌ ಮುನಾಫ್‌‌‌, ಶಾಹೀದ್‌‌‌, ಕಾನೆ ಜಾನ್ಸನ್‌‌, ಆದರ್ಶ್‌‌, ಮೊಹಮ್ಮದ್‌ ನಾಸೀಫ್‌‌, ತಾಹೀರ್‌ ಬಂಧಿತ 8 ಮಂದಿ ವಿದ್ಯಾರ್ಥಿಗಳಾಗಿದ್ದಾರೆ. ಅವರ  ಪೈಕಿ ನಾಲ್ವರು ಡ್ರಗ್ಸ್‌‌ ಸೇವಿಸಿರುವುದು ತಿಳಿದು ಬಂದಿದೆ.

ಡಿ. 2ರಂದು ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಘರ್ಷಣೆ ನಡೆದಿತ್ತು. ಯೇನಪೋಯ  ಹಾಸ್ಟೆಲ್‌‌ ಬಳಿಯಲ್ಲಿ ಆದರ್ಶ್‌ ಪ್ರೇಮ್‌ ಕುಮಾರ್‌ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಾಗ ಸಿನಾನ್ ಮತ್ತು ಅದೇ ಕಾಲೇಜಿನ ಇತರ 8 ಮಂದಿ ವಿದ್ಯಾರ್ಥಿಗಳು ಇಂಟರ್ಲಾಕ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಆದರ್ಶ್ ಹಾಗೂ ಮೊಹಮ್ಮದ್ ನಾಸಿಫ್ ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು