11:49 AM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು?

01/06/2021, 08:38

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪೊಲೀಸರ ಅವಿಭಾಜ್ಯ ಅಂಗವೆಂದೇ ಕರೆಯಲ್ಪಡುವ ಹೋಮ್ ಗಾರ್ಡ್ ಪೊಲೀಸರಂತೆ ಕಾರ್ಯ ನಿರ್ವಹಿಸುತ್ತಾರೆ. ಪೋಲಿಸರೊಂದಿಗೆ ಸೇರಿ ದಿನನಿತ್ಯ ಉರಿಬಿಸಿ ನಲ್ಲಿ, ಮಳೆ ಗಾಳಿಯಲ್ಲಿ ತಮಗೆ ನಿಗದಿಪಡಿಸಿದ ಸ್ಥಳದಲ್ಲಿ ಮರು ಮಾತಿಲ್ಲದೆ ಕರ್ತವ್ಯ ನಿರ್ವಹಿಸುತ್ತಾರೆ. ಆದರೆ ಸಂಬಳದ ವಿಷಯ ಬರುವಾಗ ಇದ್ಯಾವುದನ್ನೂ ಪರಿಗಣಿಸಲಾಗುವುದಿಲ್ಲ. ವೇತನದಲ್ಲಿ ತಾರತಮ್ಯ ತೋರಿಸಲಾಗುತ್ತದೆ. ಅಷ್ಟೇ ಅಲ್ಲ, ಕೊಡುವ ವೇತನವನ್ನು ಕೂಡ ಕೆಲವೊಮ್ಮೆ ಸರಿಯಾದ ಸಮಯಕ್ಕೆ ಪಾವತಿಸುತ್ತಿಲ್ಲ.

ಲಾಕ್ ಡೌನ್, ನೆರೆ, ಚಂಡಮಾರುತ, ರೋಡ್ ಶೋ, ರ್ಯಾಲಿ, ಜಾತ್ರೆ, ಗಲಭೆಗಳು ಸಂದರ್ಭದಲ್ಲಿ ಹೋಮ್ ಗಾರ್ಡ್ ಗಳು ಬೇಕೇ ಬೇಕು. ಕೊರೊನಾ ಸಂದರ್ಭದಲ್ಲಿ ಜನರು ರಸ್ತೆಗಿಳಿಯದಂತೆ ನೋಡಿಕೊಳ್ಳಲು ಪೊಲೀಸರ ಜತೆ ಇವರು ಬೇಕೇ ಬೇಕು. ಗಲಭೆ, ನೆರೆ, ಚಂಡಮಾರುತ ಮುಂತಾದ ಆಪತ್ಕಾಲದಲ್ಲಿ ಜನರ ಪ್ರಾಣ ರಕ್ಷಣೆ ಮಾಡುತ್ತಾರೆ.ಆದರೆ ವೇತನದಲ್ಲಿ ಮಾತ್ರ ತಾರತಮ್ಯ.

ಸರಕಾರ ಏನೋ ಇವರಿಗೆ ಕೊರೊನಾ ವಾರಿಯಸ್ ಎಂದು ಬಿರುದು ಕೊಟ್ಟಿದೆ. ಅಷ್ಟು ಸಾಕೆ? ಅವರ ಕಷ್ಟ ಗಳನ್ನು ನೋಡ್ಬೇಕಲ್ವೇ? ಅವರಿಗೆ ಬಾರೋ ಸಂಬಳ ತರಕಾರಿಗೆ ಸಾಲದು. ತಿಂಗಳಲ್ಲಿ 20 ದಿನ ಕೆಲಸ. ಉಳಿದ ದಿನ ರಜೆ. ಆದರೆ ಆ ಸಾವಿರ ಅದೆಲ್ಲಿ ಸಾಕಾಗುತ್ತೆ? ಕುಟುಂಬದಲ್ಲಿ ಅವರಷ್ಟೇ ಈ ಲಾಕ್ ಡೌನ್ ನಲ್ಲಿ ದುಡಿಯಬೇಕಷ್ಟೆ. ಬೇರೆ ಯಾವ ಸದಸ್ಯನಿಗೂ ಉದ್ಯೋಗಳಲಿಲ್ಲ. ಅವರ ಮನೆ ಬಾಡಿಗೆ, ದಿನದ ದಿನಸಿ ಖರ್ಚು ಇದಕ್ಕೆಲ್ಲ ಏನು ಮಾಡಬೇಕು? ದಿನ ನಿತ್ಯ ಗಜಿ, ಸಾರು, ಉಪ್ಪಿನ ಕಾಯಿಯಷ್ಟೇ. ಅದಲ್ಲದೆ, ಮನೆಯಿಂದ ನಗರಕ್ಕೆ ಡ್ಯೂಟಿಗೆ ಬರಲು, ಸಂಜೆ, ಮಧ್ಯಾಹ್ನ ಹೋಗಲು ವಾಹನ ವ್ಯವಸ್ಥೆಯೂ ಇಲ್ಲ. ಇದೆಲ್ಲವನ್ನೂ ಮನಗಂಡೇ ನಮಗೂ ತಿಂಗಳಿಡೀ ಕೆಲಸ ಕೊಡಿ ಎನುತ್ತಾರೆ ಹೋಮ್ ಗಾರ್ಡ್ಸ್ …. ಜಿಲ್ಲಾಧಿಕಾರಿ ಗಳೇ ಒಮ್ಮೆ ಅವರ ಸಮಸ್ಯೆ ಆಲಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು