8:34 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಭೂಪಾಲ್ ಅನಿಲ ದುರಂತ ಸ್ಮರಣಾರ್ಥ: ಎಂಆರ್ ಪಿಎಲ್ ನಿಂದ ಅಣುಕು ಪ್ರದರ್ಶನ

05/12/2021, 15:55

ಮಂಗಳೂರು (reporterkarnataka.com): ರಾಸಾಯನಿಕ ವಿಪತ್ತು ದುರಂತ ನಿರ್ವಹಣಾ ತಡೆಗಟ್ಟುವ ದಿನದ ಅಂಗವಾಗಿ ಬೆಂಕಿ ದುರಂತ ಸಂಭವಿಸಿದ ಸಂದರ್ಭದಲ್ಲಿ ಅದರ ನಿರ್ವಹಣೆಯ ಅಣುಕು ಪ್ರದರ್ಶನವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‍ನ ಹೈಡ್ರೋ ಕ್ರ್ಯಾಕರ್ 2ನೇ ಘಟಕದಲ್ಲಿ ಶನಿವಾರ ಹಮ್ಮಿಕೊಳ್ಳಲಾಯಿತು.

ಸುಮಾರು 45 ನಿಮಿಷಗಳ ಕಾಲ ಮಾಕ್ ಡ್ರಿಲ್ ಅಗ್ನಿಶಾಮಕ ಮತ್ತು ತಂಪಾಗಿಸುವ ಕಾರ್ಯಾಚರಣೆ ನಡೆಯಿತು. ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂ.ಆರ್.ಪಿ.ಎಲ್.)ನ ಅತ್ಯಾಧುನಿಕ ಉಪಕರಣ ಹಾಗೂ ಸಲಕರಣೆಗಳ ಉಪಯೋಗವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.

ಅಣುಕು ಪ್ರದರ್ಶನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸದಸ್ಯರು ಅಣುಕು ಪ್ರದರ್ಶನವನ್ನು ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ  ಅಧಿಕಾರಿ ವಿಜಯ್ ಕುಮಾರ್ ಪೂಜಾರ್, ಜಿಲ್ಲಾ ಬಿಕ್ಕಟ್ಟು ನಿರ್ವಹಣಾ ಪ್ರಾಧಿಕಾರದ ಹಾಗೂ ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ ಸಿ. ಮಿಶ್ರಿಕೋಟಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಭೂಪಾಲ್ ಅನಿಲ ದುರಂತದ ಸ್ಮರಣಾರ್ಥ ಈ ಅಣುಕು ಪ್ರದರ್ಶನವನ್ನು ಆಯೋಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು