5:52 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಭೂಪಾಲ್ ಅನಿಲ ದುರಂತ ಸ್ಮರಣಾರ್ಥ: ಎಂಆರ್ ಪಿಎಲ್ ನಿಂದ ಅಣುಕು ಪ್ರದರ್ಶನ

05/12/2021, 15:55

ಮಂಗಳೂರು (reporterkarnataka.com): ರಾಸಾಯನಿಕ ವಿಪತ್ತು ದುರಂತ ನಿರ್ವಹಣಾ ತಡೆಗಟ್ಟುವ ದಿನದ ಅಂಗವಾಗಿ ಬೆಂಕಿ ದುರಂತ ಸಂಭವಿಸಿದ ಸಂದರ್ಭದಲ್ಲಿ ಅದರ ನಿರ್ವಹಣೆಯ ಅಣುಕು ಪ್ರದರ್ಶನವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‍ನ ಹೈಡ್ರೋ ಕ್ರ್ಯಾಕರ್ 2ನೇ ಘಟಕದಲ್ಲಿ ಶನಿವಾರ ಹಮ್ಮಿಕೊಳ್ಳಲಾಯಿತು.

ಸುಮಾರು 45 ನಿಮಿಷಗಳ ಕಾಲ ಮಾಕ್ ಡ್ರಿಲ್ ಅಗ್ನಿಶಾಮಕ ಮತ್ತು ತಂಪಾಗಿಸುವ ಕಾರ್ಯಾಚರಣೆ ನಡೆಯಿತು. ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂ.ಆರ್.ಪಿ.ಎಲ್.)ನ ಅತ್ಯಾಧುನಿಕ ಉಪಕರಣ ಹಾಗೂ ಸಲಕರಣೆಗಳ ಉಪಯೋಗವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.

ಅಣುಕು ಪ್ರದರ್ಶನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸದಸ್ಯರು ಅಣುಕು ಪ್ರದರ್ಶನವನ್ನು ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ  ಅಧಿಕಾರಿ ವಿಜಯ್ ಕುಮಾರ್ ಪೂಜಾರ್, ಜಿಲ್ಲಾ ಬಿಕ್ಕಟ್ಟು ನಿರ್ವಹಣಾ ಪ್ರಾಧಿಕಾರದ ಹಾಗೂ ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ ಸಿ. ಮಿಶ್ರಿಕೋಟಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಭೂಪಾಲ್ ಅನಿಲ ದುರಂತದ ಸ್ಮರಣಾರ್ಥ ಈ ಅಣುಕು ಪ್ರದರ್ಶನವನ್ನು ಆಯೋಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು