8:20 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ನಾಗರಬೆಂಚಿ: ಕನಕಮೂರ್ತಿ ಅನಾವರಣ; ಸಾಮೂಹಿಕ ವಿವಾಹ ವೈಭವ

05/12/2021, 18:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಾಗರಬೆಂಚಿ ಗ್ರಾಮದಲ್ಲಿ ನೂತನ ಕನಕ ಮೂರ್ತಿಯ ಅನಾವರಣ ಮತ್ತು ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಕಾರ್ಯಕ್ರಮ ಜರಗಿತು. 

ಮಸ್ಕಿಯ ಷಟಸ್ಥಲ ಬ್ರಹ್ಮ ಹೊರ ರುದ್ರಮುನಿ ಶಿವಾಚಾರ್ಯರು, ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕನಕ ಮೂರ್ತಿ ಪ್ರತಿಷ್ಠಾಪನ ಮಾಡುವುದರ ಜತೆಗೆ ಸಾಮೂಹಿಕ ವಿವಾಹಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿರುವ 11 ಜೋಡಿ ದಂಪತಿಗಳಿಗೆ ಶುಭ ಹಾರೈಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಮಸ್ಕಿಯ ವರ ರುದ್ರಮುನಿ ಶಿವಾಚಾರ್ಯರು, ಸರ್ವಧರ್ಮದವರು ಸೇರಿ ಒಳ್ಳೆಯ ಕಾರ್ಯಕ್ರಮ ಮಾಡುತ್ತಿರುವುದು ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವು ಅತ್ಯಂತ ಪುಣ್ಯದ ಕೆಲಸ ಎಂದು ಹೇಳಿದರು.

 ಪ್ರತಿಯೊಬ್ಬ ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಮನಸ್ಸಿಗೆ ಮತ್ತು ಜೀವನ ನೆಮ್ಮದಿ ಸಿಗುತ್ತದೆ. ಇಂತಹ ಕಾರ್ಯಕ್ರಮಗಳು ಮಾಡುವುದರಿಂದ ಪುಣ್ಯದ ಕೆಲಸ ಬರುತ್ತದೆ ಎಂದು ನುಡಿದರು.

ನ್ಯಾಯವಾದಿ ಗುಡಿಹಾಳ ನಿರುಪಾದೆಪ್ಪ, ಮಾಜಿ ಸಂಸದ ಕೆ. ವಿರುಪಾಕ್ಷಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು