11:45 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಪಿಡಿಒ ನಿರ್ಲಕ್ಷ್ಯ ವಿರುದ್ಧ ನಿವೃತ್ತ ಅಧಿಕಾರಿಯಿಂದ ತಾಪಂ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ

05/12/2021, 18:56

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಿಡಿಓ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಿವೃತ್ತ ಅಧಿಕಾರಿ ಬಿ.ಡಿ.ಓಬಪ್ಪರವರು ಕೂಡ್ಲಿಗಿ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಏಕಾಂಗಿಯಾಗಿ ಉಪವಾಸ ಧರಣಿ ಸತ್ಯಾಗ್ರಹ ಕುಳಿತಿದ್ದಾರೆ. 

ತಾಲೂಕಿನ ಗುಂಡು ಮುಣುಗು ಗ್ರಾಮ ಪಂಚಾಯಿತಿಯಲ್ಲಿರುವ ಆಸ್ತಿಪತ್ರಕ್ಕೆ ಸಂಬಂಧಿಸಿದ ಕಡತ, ಹತ್ತಾರು ತಿಂಗಳುಗಳಿಂದ ಪಿಡಿಓ ರಾಮಕೃಷ್ಣ ರ ಬಳಿಯಿದ್ದು ಅವರು ಕಡತ ವಿಲೇವಾರಿ ಮಾಡದೇ ನಿರ್ಲಕ್ಷ್ಯ ಧೋರಣೆ ತಾಳುತ್ತಿದ್ದಾರೆ. ಹಲವು ತಿಂಗಳುಗಳಿಂದ ವಿನಾ ಕಾರಣ ತಮ್ಮನ್ನು ಅಲೆದಾಡಿಸುತ್ತಿದ್ದಾರೆಂದು ಭೀಮ ಸಮುದ್ರ ಗ್ರಾಮದ ಬಿ.ಡಿ.ಓಬಪ್ಪ ಆರೋಪಿಸಿದ್ದಾರೆ, ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ ಅಧಿಕಾರಿ ಜಿ.ಎಂ.ಬಸಣ್ಣ ಅವರ ಗಮನಕ್ಕೆ ಲಿಖಿತವಾಗಿ ತಂದಿದ್ದು. ಅವರೂ ಕೂಡ ಸ್ಪಂದಿಸಿಲ್ಲ ಅವರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ದೂರಿದ್ದಾರೆ. 

ಇಲಾಖಾ ಉನ್ನತಾಧಿಕಾರಿಗಳ ಗಮನಕ್ಕೆ ತಂದಿದ್ದರಿಂದಾಗಿ ಕುಪಿತಗೊಂಡ
ಪಿಡಿಓ ರಾಮಕೃಷ್ಣ ತಮ್ಮೊಂದಿಗೆ ಇನ್ನೂ ಉದ್ಧಟನದಿಂದ ವರ್ತಿಸುತ್ತಿದ್ದಾರೆಂದು ಬಿ.ಡಿ. ಓಬಪ್ಪ ದೂರಿದ್ದಾರೆ. ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣರವರ ಅನುಚಿತ ವರ್ತನೆ ಹಾಗೂ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯದಲ್ಲಿ ತಾಪಂ ಅಧಿಕಾರಿ ಜಿ.ಎಂ.ಬಸಣ್ಣರವರೂ ಕೂಡ ಬೇಜವಾಬ್ದಾರಿಯನ್ನು  ತೋರುತ್ತಿದ್ದು,ಈ ಅವ್ಯವಸ್ಥೆಯನ್ನು ತಾವು ಖಂಡಿಸಿ ಉಪವಾಸ ಧರಣಿ ಸತ್ಯಾಗ್ರಹ ಮಾಡಿತ್ತಿರುವುದಾಗಿ ಓಬಣ್ಣ ತಿಳಿಸಿದ್ದಾರೆ.

ಅವರು ಬೆಳಿಗ್ಗೆಯಿಂದಲೇ ಕೂಡ್ಲಿಗಿ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಏಕಾಂಗಿಯಾಗಿ ಧರಣಿ ಉಪವಾಸ ಸತ್ಯಾಗ್ರಹ ಮಾಡಿದರು.ತಾಪಂ ಕೆಲ ಸಿಬ್ಬಂದಿಯವರು ಅವರ ಉಪವಾಸ ಧರಣಿ ಸತ್ಯಾಗ್ರಹ ಕೈಬಿಡುವಂತೆ ಮನವೊಲಿಸೋ ಪ್ರಯತ್ನ ನಡೆಸಿದರು. ಆದರೆ ಅದಾವುದಕ್ಕೂ ಬಗ್ಗದ ಓಬಣ್ಣ ತಮ್ಮ ಉಪವಾಸ ಧರಣಿ ಮುಂದುವರೆಸಿದರು. ಈ ಸಂಬಂಧಿಸಿದಂತೆ ಅವರು ಹೇಳಿಕೆ ನೀಡಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಸ್ಪಂಧಿಸದಿದ್ದಲ್ಲಿ ಶೀಘ್ರವೇ ವಿಜಯನಗರದ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಚೇರಿ ಬಳಿ ತಾವು ಏಕಾಂಗಿಯಾಗಿ ಉಪವಾದ ಧರಣಿ ಸತ್ಯಾಗ್ರಹ ಮಾಡೋ ಮೂಲಕ,ಅವ್ಯವಸ್ಥೆ ವಿರುದ್ಧ ಹೋರಾಟ  ಮುಂದುವರೆಸುವುದಾಗಿ ಓಬಣ್ಣ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು