8:34 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ನಲ್ಲಿ ಉದ್ಯೋಗದ ಭರವಸೆ: ವಂಡ್ಸೆಯ ಯುವತಿಗೆ 5 ಲಕ್ಷ ರೂ. ವಂಚನೆ

05/12/2021, 20:28

ಉಡುಪಿ(reporterkarnataka.com): ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕಳುಹಿಸಿದ ಜಿ-ಮೇಲ್ ಸಂದೇಶವನ್ನು ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೈಕಾಣ ಎಂಬಲ್ಲಿ ನಡೆದಿದೆ.

ವಂಡ್ಸೆ ಗ್ರಾಮದ ಕೈಕಾಣ ನಿವಾಸಿ ಅನುಷಾ (21) ವಂಚನೆಗೊಳಗಾದ ಯುವತಿ. ಇವರಿಗೆ 2021 ನೇ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರು ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ  ಜಿ-ಮೇಲ್ ಸಂದೇಶವೊಂದು ಬಂದಿತ್ತು.

ಅದರಲಿದ್ದ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿದ್ದು, ಆಗ ಪರಿಚಿತ ವ್ಯಕ್ತಿ ಉದ್ಯೋಗದ ಕ್ಲಿಯರೆನ್ಸ್ ಮತ್ತು ಇತರೇ ಚಾರ್ಜ್‌ ಎಂದು ಹೇಳಿ ಅನುಷಾ ಅವರಿಂದ ಗೂಗಲ್ ಪೇ ಮೂಲಕ ₹65 ಸಾವಿರ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಆ ಬಳಿಕ ವಂಚಕರು ₹25 ಲಕ್ಷ ಬಹುಮಾನ ಗೆದ್ದಿದ್ದೀರಿ ಎಂಬುದಾಗಿ ವಾಟ್ಸ್ ಅಪ್ ನಲ್ಲಿ ಅನುಷಾ ಅವರಿಗೆ ಸಂದೇಶವನ್ನು ಕಳುಹಿಸಿದ್ದು, ಅದನ್ನು ನಂಬಿದ ಅನುಷಾ ವಂಚಕರ ಬ್ಯಾಂಕ್ ಖಾತೆಗೆ ಮತ್ತೆ ₹ 5,01,540 ಹಣ ಪಾವತಿಸಿದ್ದಾರೆ.

ವಂಚಕರು ಉದ್ಯೋಗ ಭರವಸೆ ಹಾಗೂ ಬಹುಮಾನದ ಗೆದ್ದಿದ್ದೀರಿ ಎಂದು ನಂಬಿಸಿ ಅನುಷಾ ಅವರಿಂದ ಒಟ್ಟು ₹ 5,66,540 ದೋಚಿ ಮೋಸ ಮಾಡಿದ್ದಾರೆ. ಈ ಬಗ್ಗೆ ಅನುಷಾ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು