10:16 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ನಲ್ಲಿ ಉದ್ಯೋಗದ ಭರವಸೆ: ವಂಡ್ಸೆಯ ಯುವತಿಗೆ 5 ಲಕ್ಷ ರೂ. ವಂಚನೆ

05/12/2021, 20:28

ಉಡುಪಿ(reporterkarnataka.com): ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕಳುಹಿಸಿದ ಜಿ-ಮೇಲ್ ಸಂದೇಶವನ್ನು ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೈಕಾಣ ಎಂಬಲ್ಲಿ ನಡೆದಿದೆ.

ವಂಡ್ಸೆ ಗ್ರಾಮದ ಕೈಕಾಣ ನಿವಾಸಿ ಅನುಷಾ (21) ವಂಚನೆಗೊಳಗಾದ ಯುವತಿ. ಇವರಿಗೆ 2021 ನೇ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರು ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ  ಜಿ-ಮೇಲ್ ಸಂದೇಶವೊಂದು ಬಂದಿತ್ತು.

ಅದರಲಿದ್ದ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿದ್ದು, ಆಗ ಪರಿಚಿತ ವ್ಯಕ್ತಿ ಉದ್ಯೋಗದ ಕ್ಲಿಯರೆನ್ಸ್ ಮತ್ತು ಇತರೇ ಚಾರ್ಜ್‌ ಎಂದು ಹೇಳಿ ಅನುಷಾ ಅವರಿಂದ ಗೂಗಲ್ ಪೇ ಮೂಲಕ ₹65 ಸಾವಿರ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಆ ಬಳಿಕ ವಂಚಕರು ₹25 ಲಕ್ಷ ಬಹುಮಾನ ಗೆದ್ದಿದ್ದೀರಿ ಎಂಬುದಾಗಿ ವಾಟ್ಸ್ ಅಪ್ ನಲ್ಲಿ ಅನುಷಾ ಅವರಿಗೆ ಸಂದೇಶವನ್ನು ಕಳುಹಿಸಿದ್ದು, ಅದನ್ನು ನಂಬಿದ ಅನುಷಾ ವಂಚಕರ ಬ್ಯಾಂಕ್ ಖಾತೆಗೆ ಮತ್ತೆ ₹ 5,01,540 ಹಣ ಪಾವತಿಸಿದ್ದಾರೆ.

ವಂಚಕರು ಉದ್ಯೋಗ ಭರವಸೆ ಹಾಗೂ ಬಹುಮಾನದ ಗೆದ್ದಿದ್ದೀರಿ ಎಂದು ನಂಬಿಸಿ ಅನುಷಾ ಅವರಿಂದ ಒಟ್ಟು ₹ 5,66,540 ದೋಚಿ ಮೋಸ ಮಾಡಿದ್ದಾರೆ. ಈ ಬಗ್ಗೆ ಅನುಷಾ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು