12:05 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಪುನೀತ್‌ ರಾಜ್‌ ಕುಮಾರ್‌‌ ನಾಡಿಗೆ ನೀಡಿದ ಸೇವೆ ಸ್ಮರಣೀಯ: ಭೋಜರಾಜ್ ವಾಮಂಜೂರು

06/12/2021, 20:00

ಕಾರ್ಕಳ(reporterkarnataka.com): ನಮ್ಮೆಲ್ಲರ ಅಚ್ಚುಮೆಚ್ಚಿನ ಅಪ್ಪು ನಿಧನರಾಗಿ ತಿಂಗಳು ಒಂದು ಕಳೆದರೂ ಇಡೀ ನಾಡು ಶೋಕದಿಂದಲೇ ಇದೆ. ಪುನೀತ್‌ ರಾಜ್‌ ಕುಮಾರ್‌‌ ನಾಡಿಗೆ ನೀಡಿದ ಸೇವೆ ಸ್ಮರಣೀಯವಾಗಿದ್ದು, ಮಾದರಿಯಾಗಿದೆ ಎಂದು ರಂಗಭೂಮಿ ಕಲಾವಿದ,  ಚಿತ್ರನಟ ಭೋಜರಾಜ್‌ ವಾಮಂಜೂರು ಹೇಳಿದರು.

ಅವರು ಸೋಮವಾರ ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಪುನೀತ್‌ ಹಾಗೂ ಪ್ರದೀಪ್‌ ಕೋಟ್ಯಾನ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು. 

ಗೇರು ನಿಗಮದ ಅ‍ಧ್ಯಕ್ಷ ಮಣಿರಾಜ್‌ ಶೆಟ್ಟಿ, ಉದ್ಯಮಿ ಬಿ. ಕೃಷ್ಣಮೂರ್ತಿ ಪ್ರದೀಪ್‌ ಅವರೊಂದಿಗಿನ ರಾಜಕೀಯೇತರ ಸಂಬಂಧ, ಒಡನಾಟದ ಕುರಿತು ಮೆಲುಕು ಹಾಕಿದರು. 

ಅ‍ಧ್ಯಕ್ಷತೆ ವಹಿಸಿ ಮಾತನಾಡಿದ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್.‌ ರಾಜು, ಪುನೀತ್‌ ರಾಜ್‌ಕುಮಾರ್‌ ಕೇವಲ ಓರ್ವ ನಟನಾಗಿ ಗುರುಸಿಕೊಂಡಿದ್ದಲ್ಲ. ತನ್ನ ಆದರ್ಶ ವ್ಯಕ್ತಿತ್ವ, ನಿಸ್ವಾರ್ಥ, ನಿಶ್ಕಲ್ಮಶ ಸಮಾಜ ಸೇವೆಯಿಂದಲೇ ಕನ್ನಡಿಗರ ಮನೆಮನದಲ್ಲಿ ನೆಲೆಸಿದ್ದಾರೆ ಎಂದರು. 

ಪುರಸಭೆ ಮಾಜಿ ಅ‍ಧ್ಯಕ್ಷ ಪ್ರದೀಪ್‌ ಕೋಟ್ಯಾನ್‌ ಓರ್ವ ಸ್ನೇಹಜೀವಿ. ಕಾರ್ಕಳ ನಗರಕ್ಕೆ ಅವರ  ಕೊಡುಗೆ ಅಪಾರವಾಗಿತ್ತು ಎಂದರು. 

ನೇತ್ರ ದಾನ: ರಾಜ್‌ಕುಮಾರ್‌ ಕುಟುಂಬ ನೇತ್ರದಾನದಿಂದ ಪ್ರೇರಣೆಗೊಂಡ ನಾನು, ನನ್ನ ಪತ್ನಿ ನೇತ್ರದಾನಕ್ಕೆ ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಕಾರ್ಕಳದ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ನೇತ್ರ ದಾನ ನೋಂದಣಿ ನಡೆಸುವ ಇರಾದೆಯೆಂದು ರಾಜು ಅವರು ತಿಳಿಸಿದರು. 

ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌, ಗೆಜ್ಜೆಗಿರಿ ನಂದನಪಿತ್ತಿಲ್‌ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಚಿಲಿಂಬಿ, ಪ್ರಭಾಕರ್‌ ಬಂಗೇರ, ಪ್ರವೀಣ್‌ ಸುವರ್ಣ ಉಪಸ್ಥಿತರಿದ್ದರು. 

ನವೀನ್‌ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಕ್ಷಿತ್‌ ಕೆ.ಎಂ. ಬಳಗದವರು ಸ್ವರನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು