11:50 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪುನೀತ್‌ ರಾಜ್‌ ಕುಮಾರ್‌‌ ನಾಡಿಗೆ ನೀಡಿದ ಸೇವೆ ಸ್ಮರಣೀಯ: ಭೋಜರಾಜ್ ವಾಮಂಜೂರು

06/12/2021, 20:00

ಕಾರ್ಕಳ(reporterkarnataka.com): ನಮ್ಮೆಲ್ಲರ ಅಚ್ಚುಮೆಚ್ಚಿನ ಅಪ್ಪು ನಿಧನರಾಗಿ ತಿಂಗಳು ಒಂದು ಕಳೆದರೂ ಇಡೀ ನಾಡು ಶೋಕದಿಂದಲೇ ಇದೆ. ಪುನೀತ್‌ ರಾಜ್‌ ಕುಮಾರ್‌‌ ನಾಡಿಗೆ ನೀಡಿದ ಸೇವೆ ಸ್ಮರಣೀಯವಾಗಿದ್ದು, ಮಾದರಿಯಾಗಿದೆ ಎಂದು ರಂಗಭೂಮಿ ಕಲಾವಿದ,  ಚಿತ್ರನಟ ಭೋಜರಾಜ್‌ ವಾಮಂಜೂರು ಹೇಳಿದರು.

ಅವರು ಸೋಮವಾರ ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಪುನೀತ್‌ ಹಾಗೂ ಪ್ರದೀಪ್‌ ಕೋಟ್ಯಾನ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು. 

ಗೇರು ನಿಗಮದ ಅ‍ಧ್ಯಕ್ಷ ಮಣಿರಾಜ್‌ ಶೆಟ್ಟಿ, ಉದ್ಯಮಿ ಬಿ. ಕೃಷ್ಣಮೂರ್ತಿ ಪ್ರದೀಪ್‌ ಅವರೊಂದಿಗಿನ ರಾಜಕೀಯೇತರ ಸಂಬಂಧ, ಒಡನಾಟದ ಕುರಿತು ಮೆಲುಕು ಹಾಕಿದರು. 

ಅ‍ಧ್ಯಕ್ಷತೆ ವಹಿಸಿ ಮಾತನಾಡಿದ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್.‌ ರಾಜು, ಪುನೀತ್‌ ರಾಜ್‌ಕುಮಾರ್‌ ಕೇವಲ ಓರ್ವ ನಟನಾಗಿ ಗುರುಸಿಕೊಂಡಿದ್ದಲ್ಲ. ತನ್ನ ಆದರ್ಶ ವ್ಯಕ್ತಿತ್ವ, ನಿಸ್ವಾರ್ಥ, ನಿಶ್ಕಲ್ಮಶ ಸಮಾಜ ಸೇವೆಯಿಂದಲೇ ಕನ್ನಡಿಗರ ಮನೆಮನದಲ್ಲಿ ನೆಲೆಸಿದ್ದಾರೆ ಎಂದರು. 

ಪುರಸಭೆ ಮಾಜಿ ಅ‍ಧ್ಯಕ್ಷ ಪ್ರದೀಪ್‌ ಕೋಟ್ಯಾನ್‌ ಓರ್ವ ಸ್ನೇಹಜೀವಿ. ಕಾರ್ಕಳ ನಗರಕ್ಕೆ ಅವರ  ಕೊಡುಗೆ ಅಪಾರವಾಗಿತ್ತು ಎಂದರು. 

ನೇತ್ರ ದಾನ: ರಾಜ್‌ಕುಮಾರ್‌ ಕುಟುಂಬ ನೇತ್ರದಾನದಿಂದ ಪ್ರೇರಣೆಗೊಂಡ ನಾನು, ನನ್ನ ಪತ್ನಿ ನೇತ್ರದಾನಕ್ಕೆ ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಕಾರ್ಕಳದ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ನೇತ್ರ ದಾನ ನೋಂದಣಿ ನಡೆಸುವ ಇರಾದೆಯೆಂದು ರಾಜು ಅವರು ತಿಳಿಸಿದರು. 

ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌, ಗೆಜ್ಜೆಗಿರಿ ನಂದನಪಿತ್ತಿಲ್‌ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಚಿಲಿಂಬಿ, ಪ್ರಭಾಕರ್‌ ಬಂಗೇರ, ಪ್ರವೀಣ್‌ ಸುವರ್ಣ ಉಪಸ್ಥಿತರಿದ್ದರು. 

ನವೀನ್‌ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಕ್ಷಿತ್‌ ಕೆ.ಎಂ. ಬಳಗದವರು ಸ್ವರನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು