12:21 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಪುನೀತ್‌ ರಾಜ್‌ ಕುಮಾರ್‌‌ ನಾಡಿಗೆ ನೀಡಿದ ಸೇವೆ ಸ್ಮರಣೀಯ: ಭೋಜರಾಜ್ ವಾಮಂಜೂರು

06/12/2021, 20:00

ಕಾರ್ಕಳ(reporterkarnataka.com): ನಮ್ಮೆಲ್ಲರ ಅಚ್ಚುಮೆಚ್ಚಿನ ಅಪ್ಪು ನಿಧನರಾಗಿ ತಿಂಗಳು ಒಂದು ಕಳೆದರೂ ಇಡೀ ನಾಡು ಶೋಕದಿಂದಲೇ ಇದೆ. ಪುನೀತ್‌ ರಾಜ್‌ ಕುಮಾರ್‌‌ ನಾಡಿಗೆ ನೀಡಿದ ಸೇವೆ ಸ್ಮರಣೀಯವಾಗಿದ್ದು, ಮಾದರಿಯಾಗಿದೆ ಎಂದು ರಂಗಭೂಮಿ ಕಲಾವಿದ,  ಚಿತ್ರನಟ ಭೋಜರಾಜ್‌ ವಾಮಂಜೂರು ಹೇಳಿದರು.

ಅವರು ಸೋಮವಾರ ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಪುನೀತ್‌ ಹಾಗೂ ಪ್ರದೀಪ್‌ ಕೋಟ್ಯಾನ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು. 

ಗೇರು ನಿಗಮದ ಅ‍ಧ್ಯಕ್ಷ ಮಣಿರಾಜ್‌ ಶೆಟ್ಟಿ, ಉದ್ಯಮಿ ಬಿ. ಕೃಷ್ಣಮೂರ್ತಿ ಪ್ರದೀಪ್‌ ಅವರೊಂದಿಗಿನ ರಾಜಕೀಯೇತರ ಸಂಬಂಧ, ಒಡನಾಟದ ಕುರಿತು ಮೆಲುಕು ಹಾಕಿದರು. 

ಅ‍ಧ್ಯಕ್ಷತೆ ವಹಿಸಿ ಮಾತನಾಡಿದ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್.‌ ರಾಜು, ಪುನೀತ್‌ ರಾಜ್‌ಕುಮಾರ್‌ ಕೇವಲ ಓರ್ವ ನಟನಾಗಿ ಗುರುಸಿಕೊಂಡಿದ್ದಲ್ಲ. ತನ್ನ ಆದರ್ಶ ವ್ಯಕ್ತಿತ್ವ, ನಿಸ್ವಾರ್ಥ, ನಿಶ್ಕಲ್ಮಶ ಸಮಾಜ ಸೇವೆಯಿಂದಲೇ ಕನ್ನಡಿಗರ ಮನೆಮನದಲ್ಲಿ ನೆಲೆಸಿದ್ದಾರೆ ಎಂದರು. 

ಪುರಸಭೆ ಮಾಜಿ ಅ‍ಧ್ಯಕ್ಷ ಪ್ರದೀಪ್‌ ಕೋಟ್ಯಾನ್‌ ಓರ್ವ ಸ್ನೇಹಜೀವಿ. ಕಾರ್ಕಳ ನಗರಕ್ಕೆ ಅವರ  ಕೊಡುಗೆ ಅಪಾರವಾಗಿತ್ತು ಎಂದರು. 

ನೇತ್ರ ದಾನ: ರಾಜ್‌ಕುಮಾರ್‌ ಕುಟುಂಬ ನೇತ್ರದಾನದಿಂದ ಪ್ರೇರಣೆಗೊಂಡ ನಾನು, ನನ್ನ ಪತ್ನಿ ನೇತ್ರದಾನಕ್ಕೆ ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಕಾರ್ಕಳದ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ನೇತ್ರ ದಾನ ನೋಂದಣಿ ನಡೆಸುವ ಇರಾದೆಯೆಂದು ರಾಜು ಅವರು ತಿಳಿಸಿದರು. 

ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌, ಗೆಜ್ಜೆಗಿರಿ ನಂದನಪಿತ್ತಿಲ್‌ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಚಿಲಿಂಬಿ, ಪ್ರಭಾಕರ್‌ ಬಂಗೇರ, ಪ್ರವೀಣ್‌ ಸುವರ್ಣ ಉಪಸ್ಥಿತರಿದ್ದರು. 

ನವೀನ್‌ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಕ್ಷಿತ್‌ ಕೆ.ಎಂ. ಬಳಗದವರು ಸ್ವರನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು