1:26 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಿಎಂ ಪುತ್ರ ವಿಜಯೇಂದ್ರ ದಿಢೀರ್ ದೆಹಲಿಗೆ ದೌಡು: ಹಾಗಾದರೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿತ್ತೇ? 

01/06/2021, 14:01

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ಎಸ್. ವಿಜಯೇಂದ್ರ ಅವರು ಮಂಗಳವಾರ ದಿಢೀರನೆ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಅವರಿಗೆ ಬುಲಾವ್ ನೀಡಿತ್ತಾ? ಅಥವಾ ವಿಜಯೇಂದ್ರ ಅವರೇ ಹೈಕಮಾಂಡ್ ಭೇಟಿಗೆ ತೆರಳಿದ್ದಾರಾ? ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ.

ಇಂದು ಮುಂಜಾನೆ 5.30ಕ್ಕೆ ವಿಜಯೇಂದ್ರ ಅವರು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ಯಾತ್ರೆ ಬಗ್ಗೆ ಯಾವುದೇ ಮಾಹಿತಿ ನೀಡದೆ ಸಿಎಂ ಪುತ್ರ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮೇಲಿಂದ ಮೇಲೆ ಬಿಜೆಪಿ ವರಿಷ್ಠರಿಗೆ ದೂರು ನೀಡುತ್ತಲೇ ಬಂದಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರಂತು ದಿನಾ ಬೆಳಗಾದರೆ ಯಡಿಯೂರಪ್ಪ ವಿರುದ್ಧ ಹಲ್ಲು ಮಸೆಯುತ್ತಲೇ ಇರುತ್ತಾರೆ. ಸಚಿವ ಈಶ್ವರಪ್ಪ ಅವರು ಕೂಡ ಇತ್ತೀಚೆಗೆ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಸಚಿವ ಸಿ.ಪಿ. ಯೋಗೀಶ್ವರ್ ಮೊನ್ನೆ ಮೊನ್ನೆ ದೆಹಲಿಗೆ ಹೋಗಿ ವರಿಷ್ಠರ ಮನೆಯ ಗೇಟು ನೋಡಿ ಬಂದಿದ್ದಾರೆ. ಇವೆಲ್ಲದರ ನಡುವೆ ಇದೀಗ ಸಿಎಂ ಪುತ್ರ ವಿಜಯೇಂದ್ರ ಅವರೇ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಉಂಟುಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು