5:09 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಪರಾಧ ತಡೆಗೆ ಪೊಲೀಸ್ ಇಲಾಖೆ ಜತೆ ಸಾರ್ವಜನಿಕರ ಸಹಕಾರ ಅಗತ್ಯ; ಪಿಎಸ್ ಐ

07/12/2021, 09:31

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com

ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಪಿಎಸ್‍ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಹೇಳಿದರು.

ತಾಲೂಕಿನ ನಾಯಕನ ಹಟ್ಟಿ ಪಟ್ಟಣದ ಆಟೋ ಮತ್ತು ಲಘು ಸರಕು ಸೇವೆ ವಾಹನಗಳ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಟೋ ಚಾಲಕರು ಮತ್ತು ಸರಕು ಸೇವಾ ವಾಹನಗಳ ಚಾಲಕರು, ಲಘು ವಾಹನಗಳ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಿಗೆ ಹೊಂದಿರಬೇಕು. ತಮ್ಮ ವಾಹನಗಳಿಗೆ ವಿಮೆಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಎಲ್ಲಿಯಾದರೂ ರಸ್ತೆ ಮಧ್ಯೆ ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ತಾವುಗಳು ಅಫಘಾತಕ್ಕೀಡದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಮುಂದಾಗಬೇಕು. ಜೊತೆಗೆ ತಮ್ಮೆದುರಿಗೆ ಯಾವುದಾದರೂ ಅಪರಾಧಿ ಚಟುವಟಿಕೆಗಳು ನಡೆಯುತ್ತಿರುವುದು ಕಂಡು ಬಂದರೆ ತಕ್ಷಣವೇ ಪೊಲೀಸರ ಗಮನಕ್ಕೆ ತರಬೇಕು. ಹಾಗೂ ಯಾರಾದರೂ ಅಪರಾಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ, ಅಂಥವರ ಬಗ್ಗೆ ಸುಳಿವು ಕೊಡಬೇಕು. ತಮ್ಮ ವಾಹನಗಳನ್ನು ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಬಳಸಬಾರದು. ಚಾಲಕರು ವಾಹನವನ್ನು ಚಲಾಯಿಸುವಾಗ ಯಾವುದೇ ಕಾರಣಕ್ಕೂ ಮದ್ಯಪಾನ ಮಾಡಬಾರದು. ವಾಹನ ಚಾಲನೆಯಲ್ಲಿ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಪೊಲೀಸರೊಂದಿಗೆ ಉತ್ತಮವಾದ ಬಾಂಧವ್ಯವನ್ನು ಹೊಂದಬೇಕು. ಇದರಿಂದ ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಕೃತ್ಯಗಳನ್ನು ತಡೆಯಲು ಸಹಕಾರಿಯಾಗುತ್ತದೆ ಎಂದು ವಾಹನ ಚಾಲಕರಿಗೆ ಕಿವಿಮಾತು ಹೇಳಿದರು.

ಇದೇವೇಳೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸರೊಂದಿಗೆ ಅಪರಾಧಿ ತಡೆ ಮಾಸಾಚರಣೆಯ ನಿಮಿತ್ತ ಜಾಗೃತಿ ಜಾಥಾವನ್ನು ನಡೆಸಲಾಯಿತು. ಸಿಬ್ಬಂದಿಗಳಾದ ಚನ್ನಕೇಶವ, ಜಗ ರೆಡ್ಡಿ, ಮಂಜುನಾಥ್, ಪ್ರದೀಪ್, ಕರಿಬಸಪ್ಪ, ಗ್ರಾಮಸ್ಥರಾದ ದಾದಪೀರ್, ಮುತ್ತಯ್ಯ, ಪ್ರಹ್ಲಾದ್ ಇದ್ದರು.

ಚಳ್ಳಕೆರೆ ತಾಲೂಕಿನ  ನಾಯಕನಹಟ್ಟಿ ಪಟ್ಟಣದಲ್ಲಿ ಆಟೋ ಮತ್ತು ಲಘು ಸರಕು ಸೇವಾ ವಾಹನಗಳ ನಿಲ್ದಾಣದಲ್ಲಿ ಭಾನುವಾರ ಪೊಲೀಸ್ ಇಲಾಖೆಯು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು