1:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಪರಾಧ ತಡೆಗೆ ಪೊಲೀಸ್ ಇಲಾಖೆ ಜತೆ ಸಾರ್ವಜನಿಕರ ಸಹಕಾರ ಅಗತ್ಯ; ಪಿಎಸ್ ಐ

07/12/2021, 09:31

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com

ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಪಿಎಸ್‍ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಹೇಳಿದರು.

ತಾಲೂಕಿನ ನಾಯಕನ ಹಟ್ಟಿ ಪಟ್ಟಣದ ಆಟೋ ಮತ್ತು ಲಘು ಸರಕು ಸೇವೆ ವಾಹನಗಳ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಟೋ ಚಾಲಕರು ಮತ್ತು ಸರಕು ಸೇವಾ ವಾಹನಗಳ ಚಾಲಕರು, ಲಘು ವಾಹನಗಳ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಿಗೆ ಹೊಂದಿರಬೇಕು. ತಮ್ಮ ವಾಹನಗಳಿಗೆ ವಿಮೆಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಎಲ್ಲಿಯಾದರೂ ರಸ್ತೆ ಮಧ್ಯೆ ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ತಾವುಗಳು ಅಫಘಾತಕ್ಕೀಡದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಮುಂದಾಗಬೇಕು. ಜೊತೆಗೆ ತಮ್ಮೆದುರಿಗೆ ಯಾವುದಾದರೂ ಅಪರಾಧಿ ಚಟುವಟಿಕೆಗಳು ನಡೆಯುತ್ತಿರುವುದು ಕಂಡು ಬಂದರೆ ತಕ್ಷಣವೇ ಪೊಲೀಸರ ಗಮನಕ್ಕೆ ತರಬೇಕು. ಹಾಗೂ ಯಾರಾದರೂ ಅಪರಾಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ, ಅಂಥವರ ಬಗ್ಗೆ ಸುಳಿವು ಕೊಡಬೇಕು. ತಮ್ಮ ವಾಹನಗಳನ್ನು ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಬಳಸಬಾರದು. ಚಾಲಕರು ವಾಹನವನ್ನು ಚಲಾಯಿಸುವಾಗ ಯಾವುದೇ ಕಾರಣಕ್ಕೂ ಮದ್ಯಪಾನ ಮಾಡಬಾರದು. ವಾಹನ ಚಾಲನೆಯಲ್ಲಿ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಪೊಲೀಸರೊಂದಿಗೆ ಉತ್ತಮವಾದ ಬಾಂಧವ್ಯವನ್ನು ಹೊಂದಬೇಕು. ಇದರಿಂದ ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಕೃತ್ಯಗಳನ್ನು ತಡೆಯಲು ಸಹಕಾರಿಯಾಗುತ್ತದೆ ಎಂದು ವಾಹನ ಚಾಲಕರಿಗೆ ಕಿವಿಮಾತು ಹೇಳಿದರು.

ಇದೇವೇಳೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸರೊಂದಿಗೆ ಅಪರಾಧಿ ತಡೆ ಮಾಸಾಚರಣೆಯ ನಿಮಿತ್ತ ಜಾಗೃತಿ ಜಾಥಾವನ್ನು ನಡೆಸಲಾಯಿತು. ಸಿಬ್ಬಂದಿಗಳಾದ ಚನ್ನಕೇಶವ, ಜಗ ರೆಡ್ಡಿ, ಮಂಜುನಾಥ್, ಪ್ರದೀಪ್, ಕರಿಬಸಪ್ಪ, ಗ್ರಾಮಸ್ಥರಾದ ದಾದಪೀರ್, ಮುತ್ತಯ್ಯ, ಪ್ರಹ್ಲಾದ್ ಇದ್ದರು.

ಚಳ್ಳಕೆರೆ ತಾಲೂಕಿನ  ನಾಯಕನಹಟ್ಟಿ ಪಟ್ಟಣದಲ್ಲಿ ಆಟೋ ಮತ್ತು ಲಘು ಸರಕು ಸೇವಾ ವಾಹನಗಳ ನಿಲ್ದಾಣದಲ್ಲಿ ಭಾನುವಾರ ಪೊಲೀಸ್ ಇಲಾಖೆಯು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು