9:30 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ತಲಚೇರಿ: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಏರಿಯಾ ಸಿ ವಿಭಾಗದ ಮಿಲನ ಸಮ್ಮೇಳನ: ಮಂಗಳೂರು ಲೀಜನ್ ಗೆ ಪ್ರಥಮ ಪ್ರಶಸ್ತಿ

07/12/2021, 10:05

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಏರಿಯಾ ಸಿ ವಿಭಾಗದ “ಮಿಲನ” ಸಮ್ಮೇಳನ ಕೇರಳದ ತಲಚೇರಿಯಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ತಲಚೇರಿಯ ಆತಿಥ್ಯದಲ್ಲಿ ನಡೆಯಿತು.

ಕೇರಳ ಮತ್ತು ಕರ್ನಾಟಕ ರಾಜ್ಯದ ಸುಮಾರು 25 ಘಟಕಗಳ ಸಮ್ಮೇಳನದ ಪ್ರಶಸ್ತಿಯಲ್ಲಿ ಪ್ರಥಮ ಸ್ಥಾನವನ್ನು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್  ಮಂಗಳೂರು ಪಡೆದುಕೊಂಡಿತು.



ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್  ನ ಅಂತಾರಾಷ್ಟ್ರೀಯ ಅಧ್ಯಕ್ಷ ಡಾ. ಅರವಿಂದ ರಾವ್ ಕೇದಿಗೆ ಪ್ರಥಮ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಅಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. Excellent story ಅವಾರ್ಡ್ ಮತ್ತು ವಿಶೇಷ ಪ್ರಶಸ್ತಿಯನ್ನು ಎಸ್ ಸಿಐ ಅಧ್ಯಕ್ಷ ಜಿ. ಕೆ. ಹರಿಪ್ರಸಾದ ರೈ ಕಾರಮೊಗರು ಗುತ್ತು ಪಡೆದುಕೊಂಡರು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಪಾಧ್ಯಕ್ಷ ಪ್ರಾಂತ್ಯ ಸಿ ಯ ಪ್ರದೀಪ್ ಪ್ರತಿಭಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್ ಸಿಐ ರಾಷ್ಟ್ರೀಯ ನಿಕಟಪೂರ್ವ ಅಧ್ಯಕ್ಷ ಕೆ.ಮಹಮ್ಮದ್ ಕೋಯಾ,  ರಾಷ್ಟ್ರೀಯ ಕೋಶಾಧಿಕಾರಿ ಸಿ.ಎಸ್. ಎಲ್. ಜೋಸ್ ಕಂಡೋತ್, ಮ್ಯಾನೇಜ್ಮೆಂಟ್ ವಿಭಾಗದ ರಾಜೇಶ್ ವೈಭವ್, ಗ್ರೌತ್ ಅಂಡ್ Dev ನ ನಿರ್ದೇಶಕ ಚಿತ್ರ ಕುಮಾರ್, ಎಸ್ ಸಿಐ ತಲಚೇರಿಯ ಅಧ್ಯಕ್ಷ ರಾಜೀವಿ, ಕಾರ್ಯಕ್ರಮ ಸಂಯೋಜಕ ಕೆ. ಅನುಪ್, ಎಸ್ ಸಿಐ ಮಂಗಳೂರಿನ ಕಾರ್ಯದರ್ಶಿ ಶಾಲಿನಿ  ಪ್ರಶಾಂತ ಸುವರ್ಣ, ಉಪಾಧ್ಯಕ್ಷ ಕಿಶೋರ್ ಫೆರ್ನಾಂಡಿಸ್, ಪ್ಲೇವಿ ಡಿಮೆಲ್ಲೋ, ಪ್ರಶಾಂತ್ ಸುವರ್ಣ, ಲತಾ ಕಲ್ಲಡ್ಕ  ಲತಾ ಕರ್ಕೇರ , ಮಾಲತಿ ಶೆಟ್ಟಿ, ಸುಬ್ರಮಣ್ಯ ಸಾಲ್ಯಾನ್, ಮನಿಷ್ ಕೃಷ್ಣ ಕಲ್ಲಡ್ಕ, ಸೀನಿಯರೇಟ್ ಕಾರ್ಯದರ್ಶಿ ನಿರ್ಮಲ ಪ್ರಮೋದ್, ಉಷಾ ಶೆಟ್ಟಿ, ಜ್ಯೋತಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು