9:31 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಎನ್‌ಇಪಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ಬಹಳಷ್ಟು ಪ್ರಾಮುಖ್ಯತೆ ನೀಡಲಾಗಿದೆ: ಡಾ.ನಾಗರತ್ನ ಕೆ.ಎ

07/12/2021, 12:12

ಮಂಗಳೂರು(reporterkarnataka.com): ಉರ್ವ ಸ್ವಸ್ತಿಕ್ ಕಾಲೇಜಿನಲ್ಲಿ  ರಾ.ಸೆ.ಯೋ ಘಟಕ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹೊಸ  ಶಿಕ್ಷಣ  ನೀತಿ(ಎನ್‌ಇಪಿ)ಯಲ್ಲಿ  ರಾಷ್ಟ್ರೀಯ ಸೇವಾ ಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅನೇಕ ಸೇವಾ ಕಾರ್ಯಗಳನ್ನು ಮಾಡಿರುವ ಸ್ವಯಂ ಸೇವಕರ ಮೂಲಕ ಏಡ್ಸ್ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯ ಸದ್ಬಳಕೆ ಮಾಡಿದರೆ  ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸಲು ಸಾಧ್ಯ ಎಂದು ಅವರು  ಹೇಳಿದರು. ನಂತರ ರಾ.ಸೆ.ಯೋ ಪ್ರತಿಜ್ಞಾ ವಿಧಿ ಬೋಧಿಸಿದರು. 

ತೇಜಸ್ವಿನಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಡಾ.ಕಬ್ಬಿನೆಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ, ಭಾಷೆಯನ್ನು ಕೇವಲ ಮಾತನಾಡಲು ಬಳಸುವುದು ಮಾತ್ರವಲ್ಲದೆ ಅದರ ಆಳ ಆಂತರ್ಯವನ್ನು ತಿಳಿಯುವ ಪ್ರಯತ್ನವನ್ನು ಮಾಡಬೇಕು. ಆಗ ಮಾತ್ರ ಸಾಂಸ್ಕೃತಿಕ ಬೆಳವಣಿಗೆ ಸಾಧ್ಯ ಎಂದು ಹೇಳಿದರು.



ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲರಾದ ಡಾ.ಮಾಲಿನಿ  ಹೆಬ್ಬಾರ್ ವಹಿಸಿದ್ದರು. ಕಾಲೇಜಿನ ನಿರ್ದೇಶಕ ರಾಘವೇಂದ್ರ ಹೊಳ್ಳ, ವಿದ್ಯಾರ್ಥಿ ಸಂಘದ ಕ್ಷೇಮಪಾಲನಾ ಅಧಿಕಾರಿ ಯತೀಂದ್ರ ಅತ್ತಾವರ ಹಾಗೂ ರಾ.ಸೆ.ಯೋ ಯೋಜನಾಧಿಕಾರಿ ವಿದ್ಯಾಲಕ್ಷ್ಮಿ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು