11:10 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಎನ್‌ಇಪಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ಬಹಳಷ್ಟು ಪ್ರಾಮುಖ್ಯತೆ ನೀಡಲಾಗಿದೆ: ಡಾ.ನಾಗರತ್ನ ಕೆ.ಎ

07/12/2021, 12:12

ಮಂಗಳೂರು(reporterkarnataka.com): ಉರ್ವ ಸ್ವಸ್ತಿಕ್ ಕಾಲೇಜಿನಲ್ಲಿ  ರಾ.ಸೆ.ಯೋ ಘಟಕ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹೊಸ  ಶಿಕ್ಷಣ  ನೀತಿ(ಎನ್‌ಇಪಿ)ಯಲ್ಲಿ  ರಾಷ್ಟ್ರೀಯ ಸೇವಾ ಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅನೇಕ ಸೇವಾ ಕಾರ್ಯಗಳನ್ನು ಮಾಡಿರುವ ಸ್ವಯಂ ಸೇವಕರ ಮೂಲಕ ಏಡ್ಸ್ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯ ಸದ್ಬಳಕೆ ಮಾಡಿದರೆ  ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸಲು ಸಾಧ್ಯ ಎಂದು ಅವರು  ಹೇಳಿದರು. ನಂತರ ರಾ.ಸೆ.ಯೋ ಪ್ರತಿಜ್ಞಾ ವಿಧಿ ಬೋಧಿಸಿದರು. 

ತೇಜಸ್ವಿನಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಡಾ.ಕಬ್ಬಿನೆಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ, ಭಾಷೆಯನ್ನು ಕೇವಲ ಮಾತನಾಡಲು ಬಳಸುವುದು ಮಾತ್ರವಲ್ಲದೆ ಅದರ ಆಳ ಆಂತರ್ಯವನ್ನು ತಿಳಿಯುವ ಪ್ರಯತ್ನವನ್ನು ಮಾಡಬೇಕು. ಆಗ ಮಾತ್ರ ಸಾಂಸ್ಕೃತಿಕ ಬೆಳವಣಿಗೆ ಸಾಧ್ಯ ಎಂದು ಹೇಳಿದರು.



ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲರಾದ ಡಾ.ಮಾಲಿನಿ  ಹೆಬ್ಬಾರ್ ವಹಿಸಿದ್ದರು. ಕಾಲೇಜಿನ ನಿರ್ದೇಶಕ ರಾಘವೇಂದ್ರ ಹೊಳ್ಳ, ವಿದ್ಯಾರ್ಥಿ ಸಂಘದ ಕ್ಷೇಮಪಾಲನಾ ಅಧಿಕಾರಿ ಯತೀಂದ್ರ ಅತ್ತಾವರ ಹಾಗೂ ರಾ.ಸೆ.ಯೋ ಯೋಜನಾಧಿಕಾರಿ ವಿದ್ಯಾಲಕ್ಷ್ಮಿ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು