6:38 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಎನ್‌ಇಪಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ಬಹಳಷ್ಟು ಪ್ರಾಮುಖ್ಯತೆ ನೀಡಲಾಗಿದೆ: ಡಾ.ನಾಗರತ್ನ ಕೆ.ಎ

07/12/2021, 12:12

ಮಂಗಳೂರು(reporterkarnataka.com): ಉರ್ವ ಸ್ವಸ್ತಿಕ್ ಕಾಲೇಜಿನಲ್ಲಿ  ರಾ.ಸೆ.ಯೋ ಘಟಕ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹೊಸ  ಶಿಕ್ಷಣ  ನೀತಿ(ಎನ್‌ಇಪಿ)ಯಲ್ಲಿ  ರಾಷ್ಟ್ರೀಯ ಸೇವಾ ಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅನೇಕ ಸೇವಾ ಕಾರ್ಯಗಳನ್ನು ಮಾಡಿರುವ ಸ್ವಯಂ ಸೇವಕರ ಮೂಲಕ ಏಡ್ಸ್ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯ ಸದ್ಬಳಕೆ ಮಾಡಿದರೆ  ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸಲು ಸಾಧ್ಯ ಎಂದು ಅವರು  ಹೇಳಿದರು. ನಂತರ ರಾ.ಸೆ.ಯೋ ಪ್ರತಿಜ್ಞಾ ವಿಧಿ ಬೋಧಿಸಿದರು. 

ತೇಜಸ್ವಿನಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಡಾ.ಕಬ್ಬಿನೆಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ, ಭಾಷೆಯನ್ನು ಕೇವಲ ಮಾತನಾಡಲು ಬಳಸುವುದು ಮಾತ್ರವಲ್ಲದೆ ಅದರ ಆಳ ಆಂತರ್ಯವನ್ನು ತಿಳಿಯುವ ಪ್ರಯತ್ನವನ್ನು ಮಾಡಬೇಕು. ಆಗ ಮಾತ್ರ ಸಾಂಸ್ಕೃತಿಕ ಬೆಳವಣಿಗೆ ಸಾಧ್ಯ ಎಂದು ಹೇಳಿದರು.



ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲರಾದ ಡಾ.ಮಾಲಿನಿ  ಹೆಬ್ಬಾರ್ ವಹಿಸಿದ್ದರು. ಕಾಲೇಜಿನ ನಿರ್ದೇಶಕ ರಾಘವೇಂದ್ರ ಹೊಳ್ಳ, ವಿದ್ಯಾರ್ಥಿ ಸಂಘದ ಕ್ಷೇಮಪಾಲನಾ ಅಧಿಕಾರಿ ಯತೀಂದ್ರ ಅತ್ತಾವರ ಹಾಗೂ ರಾ.ಸೆ.ಯೋ ಯೋಜನಾಧಿಕಾರಿ ವಿದ್ಯಾಲಕ್ಷ್ಮಿ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು