2:04 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಳಿನ್ ಗೆ ಕಾಂಗ್ರೆಸಿಗರ ಬದ್ಧತೆ ಗೊತ್ತಿದೆ, ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು: ಖಾದರ್ ಲೇವಡಿ

07/12/2021, 17:50

ಮಂಗಳೂರು(reporterkarnataka.com): ಕಾಂಗ್ರೆಸಿಗರ ಬದ್ಧತೆ, ಶಕ್ತಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಗೊತ್ತಿದೆ. ಈ ಹಿಂದೆ ಕಟೀಲ್ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದವರು. ಎನ್ ಎಸ್ ಯುಐ ನಲ್ಲಿ ವಿನಯ್ ಸೊರಕೆ ಪರ ದುಡಿದಿದ್ದರು ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.

ಖಾದರ್ ಮತ್ತು ರಮಾನಾಥ ರೈ ಬಿಟ್ಟು ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ ಎಂದು ಹೇಳಿಕೆ ನೀಡಿದ್ದ ನಳಿನ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಯು.ಟಿ.ಖಾದರ್, ಕಟೀಲ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದರೆ ಒಳ್ಳೆಯದು ಎಂದಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರ ಚರಿತ್ರೆಯನ್ನು ಮೊದಲು ನೋಡಲಿ. ಬಿಜೆಪಿಯಲ್ಲಿ ಅವರ ಸ್ಥಿತಿ ಏನಾಗಿದೆ ಎಂಬುದನ್ನು ಯೋಚಿಸಿ. ಕಾಂಗ್ರೆಸ್ ಮುಕ್ತಗೊಳಿಸುವ ಅನಗತ್ಯ ಯೋಜನೆ ಬೇಡ. ಈಗಾಗಲೇ ಬಿಜೆಪಿ ಸೇರಿದವರ ಪರಿಸ್ಥಿತಿ ಅತಂತ್ರವಾಗಿರುವಾಗ ನಮ್ಮ ಪಕ್ಷದವರ ಬಗ್ಗೆ ಕಟೀಲ್ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು