7:06 PM Sunday1 - February 2026
ಬ್ರೇಕಿಂಗ್ ನ್ಯೂಸ್
ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ

ಇತ್ತೀಚಿನ ಸುದ್ದಿ

ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ

01/06/2021, 14:37

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್ ಡೌನ್ ಭವಿಷ್ಯ ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ.

ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇರುವ

ಕಾರಣ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 5 ಕ್ಕಿಂತ ಕಡಿಮೆ ಹಾಗೂ ಸಾವಿನ ಪ್ರಮಾಣ ಶೇ. 1ಕ್ಕಿಂತ ಕಡಿಮೆಯಾಗುವರೆಗೂ ಲಾಕ್ ಡೌನ್ ಸೂಕ್ತ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಿದೆ.

 ರಾಜ್ಯ ಸರ್ಕಾರ ವಿಧಿಸಿರುವ ಲಾಕ್ ಡೌನ್ ಜೂನ್ 7 ಕ್ಕೆ ಕೊನೆಯಾಗಲಿದೆ. ಈ ನಿಟ್ಟಿನಲ್ಲಿ ಭಾನುವಾರ ಸಭೆ ನಡೆಸಿದ ತಜ್ಞರ ಸಮಿತಿ ಸೋಮವಾರ ಸರ್ಕಾರಕ್ಕೆ ಹಲವು ಅಂಶಗಳನ್ನು ಒಳಗೊಂಡ ವರದಿ ನೀಡಿತ್ತು. ಹೀಗಾಗಿ ಲಾಕ್ ಡೌನ್ ಭವಿಷ್ಯ ಸದ್ಯ ಸಿಎಂ ಯಡಿಯೂರಪ್ಪ ಅಂಗಳದಲ್ಲಿದ್ದು, ಜೂನ್ 6 ರಂದು ಸಭೆ ನಡೆಸಿ ಸಿಎಂ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು