2:55 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ನಾಲ್ವರ ಆತ್ಮಹತ್ಯೆ ಪ್ರಕರಣ : ಮತಾಂತರವೇ ಮರಣಕ್ಕೆ ಕಾರಣವಾಯಿತೆ ?

08/12/2021, 14:34

ಮಂಗಳೂರು (ReporterKarnataka.com) ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಚಟುವಟಿಕೆಯೇ ಕೃತ್ಯಕ್ಕೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಡೆತ್ ನೋಟ್ ಬರೆದಿರುವ ಪತಿ ನಾಗೇಶ್, ಮತಾಂತರಕ್ಕೆ ಪ್ರಯತ್ನ ನಡೆಸಿದ್ದ ಮಹಿಳೆಯ ಬಗ್ಗೆ ಮಾಹಿತಿ ನೀಡಿದ್ದಾನೆ.

ಮೋರ್ಗನ್ ಗೇಟ್ ಬಳಿ ಬಾಡಿಗೆ ಮನೆ ಹೊಂದಿದ್ದ ನಾಗೇಶ್ ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗಾ ಗ್ರಾಮದ ನಿವಾಸಿಯಾಗಿದ್ದು ಪತ್ನಿ, ಮಕ್ಕಳೊಂದಿಗೆ ವಾಸವಿದ್ದ, ಮೋರ್ಗನ್ ಗೇಟ್ ಬಳಿಯ ಮನೆಗೆ 15 ದಿನಗಳ ಹಿಂದಷ್ಟೇ ಬಂದಿದ್ದು ಅದಕ್ಕೂ ಹಿಂದೆ ವೇಲೆನ್ಸಿಯಾದಲ್ಲಿ ಅಪಾರ್ಟೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದುಕೊಂಡು ನಾಗೇಶ್ ಟ್ರಕ್ ಚಾಲಕನಾಗಿ ಕೆಲಸಕ್ಕೆ ಹೋಗುತ್ತಿದ್ದ. ಈ ನಡುವೆ, ಪತ್ನಿ ವಿಜಯಲಕ್ಷ್ಮಿ ಬಿಜೈ ನಿವಾಸಿ ಮುಸ್ಲಿಂ ಮಹಿಳೆಯೊಬ್ಬರ ಮನೆಗೆ ತೆರಳುತ್ತಿದ್ದಳು. ಮನೆ ಕೆಲಸಕ್ಕೆ ಹೋಗುತ್ತಿರುವುದಾಗಿ ವಿಜಯಲಕ್ಷ್ಮಿ ಹೇಳಿಕೊಂಡಿದ್ದಳು. ಆದರೆ, ಮಹಿಳೆಯ ಜೊತೆಗೆ ಅಲ್ಲಿಯೇ ಇರುತ್ತಿದ್ದಳು. ಕಳೆದ ಅಕ್ಟೋಬರ್ ತಿಂಗಳಲ್ಲಿ ವಿಜಯಲಕ್ಷ್ಮಿ ಗಂಡನ ಮನೆ ಬಿಟ್ಟು ಎಂಟು ದಿನಗಳ ಕಾಲ ಹೊರಗೆ ಹೋಗಿದ್ದಳು. ಈ ಬಗ್ಗೆ ಪತಿ ನಾಗೇಶ್, ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಳು.

ಇದೀಗ ಮೋರ್ಗನ್ ಗೇಟ್ ಮನೆಯಲ್ಲಿ ಏನು ಗಲಾಟೆ ಆಗಿತ್ತು ಅನ್ನೋದು ಗೊತ್ತಿಲ್ಲ. ನಿನ್ನೆ ರಾತ್ರಿ ಗಂಡ ನಾಗೇಶ್, ಹೆಂಡ್ತಿ ಮೇಲಿನ ಸಿಟ್ಟಿನಿಂದ ಪ್ರೈಡ್ ರೈಸ್ ನಲ್ಲಿ ವಿಷ ಬೆರೆಸಿ ತಂದಿರುವ ಶಂಕೆಯಿದ್ದು ಪತ್ನಿ ಮಕ್ಕಳಿಗೆ ಉಣಿಸಿದ್ದಾನೆ. ಅಲ್ಲದೆ, ರಾತ್ರಿ ವೇಳೆ ಪತ್ನಿಯನ್ನು ಮಲಗಿದಲ್ಲೇ ತಲೆದಿಂಬು ಮುಖಕ್ಕೆ ಇಟ್ಟು ಉಸಿರು ಕಟ್ಟಿಸಿ ಸಾಯಿಸಿದ ಬಗ್ಗೆ ಶಂಕೆಯಿದೆ. ಪತ್ನಿ ಮುಖದಲ್ಲಿ ರಕ್ತ ಬಂದಿದ್ದು ಬೆಡ್ ನಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಸಣ್ಣ ಮಗು ತಾಯಿ ಜೊತೆಗಿದ್ದರೆ, ದೊಡ್ಡ ಮಗಳು ಹೊರಗಡೆ ಮಲಗಿದಲ್ಲೇ ಶವವಾಗಿದ್ದಳು. ನಾಗೇಶ್ ಇಂದು ಬೆಳಗ್ಗೆ ನೇಣಿಗೆ ಶರಣಾಗಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.

ಬಿಜೈ ನಿವಾಸಿ ನೂರ್ ಜಾನ್ ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಸ್ಥಳಕ್ಕಾಗಮಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಘಟನೆ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಮೃತ ನಾಗೇಶ್, ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬಾಡಿಗೆ ಮನೆಯ ಮಾಲೀಕರು ಕ್ವಾರಿ ಹೊಂದಿದ್ದು ಅವರ ಜೊತೆಗೇ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿಲ್ಲ ಯಾಕೆ, ಕೆಲಸ ಬೇಗ ಇತ್ತು ಎಂದು ಹೇಳುವುದಕ್ಕೆ ನಾಗೇಶ್ ನನ್ನು ಕರೆದರೆ ಬಾಗಿಲು ತೆರೆದಿರಲಿಲ್ಲ. ಹೀಗಾಗಿ ಕಿಟಕಿಯಲ್ಲಿ ನೋಡಿದಾಗ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು