2:29 PM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕೇಂದ್ರ ಬಿಜೆಪಿ ಸರಕಾರ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ: ಡಾ. ಸುಬ್ರಮಣಿಯನ್ ಸ್ವಾಮಿ ಆರೋಪ

08/12/2021, 15:50

ಮಂಗಳೂರು(reporterkarnataka.com): ರಾಮ ಸೇತುವೆಯನ್ನು ಉಳಿಸಲು ನಾನು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ವಿರುದ್ಧ ಹೋರಾಟ ನಡೆಸಿದ್ದೆ. ಆದರೆ ಮೋದಿ ಸರಕಾರ ಅದನ್ನು ಪಾರಂಪರಿಕ ಸ್ಮಾರಕ ಎಂದು ಗುರುತಿಸಲು ವಿಫಲವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನದೇ ಆದ ಆರ್ಥಿಕ ಹಾಗೂ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭೆ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದರು.


ಮಂಗಳವಾರ ರಾತ್ರಿ ನಗರಕ್ಕೆ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿ, ನಾನು ಬಿಜೆಪಿಯಲ್ಲಿ ತೃಪ್ತನಾಗಿದ್ದೇನೆ. ಆದರೆ ಕೇಂದ್ರ ಸರಕಾರದ ಕೆಲವು ನೀತಿಗಳ ಬಗ್ಗೆ ನನ್ನ ವಿರೋಧವಿದೆ. ಪ್ರಧಾನಿ ಮೋದಿ ತನ್ನ ನೀತಿಯನ್ನು ಸರಿಪಡಿಸಿಕೊಂಡರೆ ನನ್ನ ವಿರೋಧವೇನೂ ಇಲ್ಲ ಎಂದರು.

ಬಿಜೆಪಿ ಸರಕಾರದ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಬಿಜೆಪಿ ತನ್ನ ಪ್ರಣಾಳಿಕೆಯನ್ನೇ ಮರೆತಿದೆ. ಹಿಂದುತ್ವ ನೀತಿ, ವಿದೇಶಿ ನೀತಿ, ಆರ್ಥಿಕ ನೀತಿಯನ್ನು ಮರೆತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತುತ್ತಿದ್ದೇನೆ ಎಂದು ಅವರು ನುಡಿದರು.

ಡಾ. ಸುಬ್ರಮಣಿಯನ್ ಸ್ವಾಮಿ ಅವರು ಈ ಸಂದರ್ಭದಲ್ಲಿ ಪತ್ನಿ ಜತೆ ಪ್ರಸಿದ್ಧ ವೈದ್ಯ ಡಾ. ಬಿ.ಎಂ. ಹೆಗ್ಡೆ ಮನೆಗೆ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು