8:10 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿರುವ ಅಭಿನಂದನಾ ಶಿಕ್ಷಣ ಸಂಸ್ಥೆಗೆ ಗಚ್ಚಿನ ಹಿರೇಮಠದ ವರ ರುದ್ರಮುನಿ ಶಿವಾಚಾರ್ಯರ ಮೆಚ್ಚಿಗೆ

01/06/2021, 17:30

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಕೋವಿಡ್ ಸಮಯದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ಮುಂದಾಗಿರುವ ಅಭಿನಂದನ್ ಶಿಕ್ಷಣ ಸಂಸ್ಥೆಗೆ ಮಸ್ಕಿ ವರ ರುದ್ರಮುನಿ ಶಿವಾಚಾರ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಇಂಥ ಕೆಲಸ ಮಾಡುವುದು ಪುಣ್ಯದ ಕೆಲಸ ವೆಂದು ಹೇಳಿದ ಸ್ವಾಮೀಜಿ, ಜನರ ಹಸಿವನ್ನು ನೀಗಿಸುವ ಹಾದಿಯಲ್ಲಿ ಅಭಿನಂದನ್ ಸಂಸ್ಥೆಯ ರಾಮಣ್ಣ ಹಂಪರಗುಂದಿ ವಿನೂತನ ಹೆಜ್ಜೆ ಇಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಮಸ್ಕಿ ಪಟ್ಟಣದಲ್ಲಿ ಕೋವಿಡ್ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದ್ದು, ಈ ಅಭಿಯಾನದ ಅಡಿಯಲ್ಲಿ ಮಸ್ಕಿ ಪಟ್ಟಣದ 9 ಮತ್ತು 16 ನೇ ವಾರ್ಡಿನಲ್ಲಿ ಭಾನುವಾರದಂದು 60 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ ನಾಗರಾಜ ಶೆಟ್ಟಿ, ಅಭಿನಂದನ್ ಸಂಸ್ಥೆಯು ಬಡ ಕುಟುಂಬಗಳಿಗೆ ಆಹಾರವನ್ನು ಒದಗಿಸುವುದರ ಜೊತೆಗೆ ಔಷಧಗಳನ್ನು ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾರ್ವಜನಿಕರಲ್ಲಿ ಧೈರ್ಯ ತುಂಬುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.  

ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದೆ ಎಂದು ನಾಗರಾಜ ಶೆಟ್ಟಿ ಹೇಳಿದರು. 

ಇದೇ ಸಂದರ್ಭದಲ್ಲಿ  ಸಿದ್ದಪ್ಪ ಹಳ್ಳಿ, ಶಿಕ್ಷಕರಾದ ಕಳಕಪ್ಪ ಹಾದಿಮನಿ, ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಶೃತಿ ಹಂಪರಗುಂದಿ, ರೇಣುಕಾ ಹಂಪರಗುಂದಿ, ಬಸವರಾಜ್ ಸ್ವಾಮಿ, ರವಿಕುಮಾರ್ ಸ್ಥಾವರಮಠ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಕಾರ್ತಿಕ್ ಜೋಗೀನ್, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು