9:34 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿರುವ ಅಭಿನಂದನಾ ಶಿಕ್ಷಣ ಸಂಸ್ಥೆಗೆ ಗಚ್ಚಿನ ಹಿರೇಮಠದ ವರ ರುದ್ರಮುನಿ ಶಿವಾಚಾರ್ಯರ ಮೆಚ್ಚಿಗೆ

01/06/2021, 17:30

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಕೋವಿಡ್ ಸಮಯದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ಮುಂದಾಗಿರುವ ಅಭಿನಂದನ್ ಶಿಕ್ಷಣ ಸಂಸ್ಥೆಗೆ ಮಸ್ಕಿ ವರ ರುದ್ರಮುನಿ ಶಿವಾಚಾರ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಇಂಥ ಕೆಲಸ ಮಾಡುವುದು ಪುಣ್ಯದ ಕೆಲಸ ವೆಂದು ಹೇಳಿದ ಸ್ವಾಮೀಜಿ, ಜನರ ಹಸಿವನ್ನು ನೀಗಿಸುವ ಹಾದಿಯಲ್ಲಿ ಅಭಿನಂದನ್ ಸಂಸ್ಥೆಯ ರಾಮಣ್ಣ ಹಂಪರಗುಂದಿ ವಿನೂತನ ಹೆಜ್ಜೆ ಇಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಮಸ್ಕಿ ಪಟ್ಟಣದಲ್ಲಿ ಕೋವಿಡ್ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದ್ದು, ಈ ಅಭಿಯಾನದ ಅಡಿಯಲ್ಲಿ ಮಸ್ಕಿ ಪಟ್ಟಣದ 9 ಮತ್ತು 16 ನೇ ವಾರ್ಡಿನಲ್ಲಿ ಭಾನುವಾರದಂದು 60 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ ನಾಗರಾಜ ಶೆಟ್ಟಿ, ಅಭಿನಂದನ್ ಸಂಸ್ಥೆಯು ಬಡ ಕುಟುಂಬಗಳಿಗೆ ಆಹಾರವನ್ನು ಒದಗಿಸುವುದರ ಜೊತೆಗೆ ಔಷಧಗಳನ್ನು ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾರ್ವಜನಿಕರಲ್ಲಿ ಧೈರ್ಯ ತುಂಬುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.  

ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದೆ ಎಂದು ನಾಗರಾಜ ಶೆಟ್ಟಿ ಹೇಳಿದರು. 

ಇದೇ ಸಂದರ್ಭದಲ್ಲಿ  ಸಿದ್ದಪ್ಪ ಹಳ್ಳಿ, ಶಿಕ್ಷಕರಾದ ಕಳಕಪ್ಪ ಹಾದಿಮನಿ, ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಶೃತಿ ಹಂಪರಗುಂದಿ, ರೇಣುಕಾ ಹಂಪರಗುಂದಿ, ಬಸವರಾಜ್ ಸ್ವಾಮಿ, ರವಿಕುಮಾರ್ ಸ್ಥಾವರಮಠ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಕಾರ್ತಿಕ್ ಜೋಗೀನ್, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು