8:38 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿರುವ ಅಭಿನಂದನಾ ಶಿಕ್ಷಣ ಸಂಸ್ಥೆಗೆ ಗಚ್ಚಿನ ಹಿರೇಮಠದ ವರ ರುದ್ರಮುನಿ ಶಿವಾಚಾರ್ಯರ ಮೆಚ್ಚಿಗೆ

01/06/2021, 17:30

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಕೋವಿಡ್ ಸಮಯದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ಮುಂದಾಗಿರುವ ಅಭಿನಂದನ್ ಶಿಕ್ಷಣ ಸಂಸ್ಥೆಗೆ ಮಸ್ಕಿ ವರ ರುದ್ರಮುನಿ ಶಿವಾಚಾರ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಇಂಥ ಕೆಲಸ ಮಾಡುವುದು ಪುಣ್ಯದ ಕೆಲಸ ವೆಂದು ಹೇಳಿದ ಸ್ವಾಮೀಜಿ, ಜನರ ಹಸಿವನ್ನು ನೀಗಿಸುವ ಹಾದಿಯಲ್ಲಿ ಅಭಿನಂದನ್ ಸಂಸ್ಥೆಯ ರಾಮಣ್ಣ ಹಂಪರಗುಂದಿ ವಿನೂತನ ಹೆಜ್ಜೆ ಇಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಮಸ್ಕಿ ಪಟ್ಟಣದಲ್ಲಿ ಕೋವಿಡ್ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದ್ದು, ಈ ಅಭಿಯಾನದ ಅಡಿಯಲ್ಲಿ ಮಸ್ಕಿ ಪಟ್ಟಣದ 9 ಮತ್ತು 16 ನೇ ವಾರ್ಡಿನಲ್ಲಿ ಭಾನುವಾರದಂದು 60 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ ನಾಗರಾಜ ಶೆಟ್ಟಿ, ಅಭಿನಂದನ್ ಸಂಸ್ಥೆಯು ಬಡ ಕುಟುಂಬಗಳಿಗೆ ಆಹಾರವನ್ನು ಒದಗಿಸುವುದರ ಜೊತೆಗೆ ಔಷಧಗಳನ್ನು ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾರ್ವಜನಿಕರಲ್ಲಿ ಧೈರ್ಯ ತುಂಬುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.  

ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದೆ ಎಂದು ನಾಗರಾಜ ಶೆಟ್ಟಿ ಹೇಳಿದರು. 

ಇದೇ ಸಂದರ್ಭದಲ್ಲಿ  ಸಿದ್ದಪ್ಪ ಹಳ್ಳಿ, ಶಿಕ್ಷಕರಾದ ಕಳಕಪ್ಪ ಹಾದಿಮನಿ, ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಶೃತಿ ಹಂಪರಗುಂದಿ, ರೇಣುಕಾ ಹಂಪರಗುಂದಿ, ಬಸವರಾಜ್ ಸ್ವಾಮಿ, ರವಿಕುಮಾರ್ ಸ್ಥಾವರಮಠ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಕಾರ್ತಿಕ್ ಜೋಗೀನ್, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು