10:21 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ; ರಾಯಚೂರು ಜಿಲ್ಲೆಯಿಂದ 12 ಮಂದಿ ಕ್ರೀಡಾಪಟುಗಳು ಆಯ್ಕೆ

09/12/2021, 10:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲಾ ಅಮೇಚೂರ್ ಖೋಖೋ ಅಸೋಸಿಯೇಷನ್ ಮತ್ತು ಮಸ್ಕಿ ತಾಲೂಕು ಅಮೆಚೂರ ಖೋಖೋ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಖೋಖೋ ತಂಡದ ಆಯ್ಕೆ ಪುರುಷ ಮತ್ತು ಮಹಿಳೆಯರಿಗಾಗಿ ನಡೆಸಲಾಗಿದ್ದು, ಸುಮಾರು 206 ಗಂಡು ಮಕ್ಕಳು 46 ಹೆಣ್ಣು ಮಕ್ಕಳು ಭಾಗವಹಿಸಿದ್ದರು.

ಇವರಲ್ಲಿ ಉತ್ತಮ 12 ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಡಿಸೆಂಬರ್ 3,4, ಮತ್ತು 5 ರಂದು ಬೆಂಗಳೂರಿನ ಹೆನ್ನಾಗರದಲ್ಲಿ ನಡೆಯುವ ರಾಜ್ಯ ಮಟ್ಟದ ಚಾಂಪಿಯನ್ ಶಿಪ್ ಗೆ ಆಯ್ಕೆ ಮಾಡಲಾಗಿದೆ. ಅದರಲ್ಲಿ ರಾಯಚೂರು ಜಿಲ್ಲೆಯ ಪುರುಷ ಹಾಗೂ ಮಹಿಳಾ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದವು. ಕನಾ೯ಟಕ ರಾಜ್ಯ ಚಾಂಪಿಯನ್ ಶಿಪ್ ನಲ್ಲಿ ಒಟ್ಟಾರೆ 16 ಜಿಲ್ಲೆಯಿಂದ ಪುರುಷ ಹಾಗೂ 12  ಜಿಲ್ಲೆಯಿಂದ ಮಹಿಳಾ ತಂಡಗಳು ಪ್ರತಿನಿಧಿಸಿದ್ದವು. ಪುರುಷ ವಿಭಾಗದಿಂದ ಒಟ್ಟಾರೆಯಾಗಿ 16 ತಂಡಗಳಿಂದ ನಾಲ್ಕು ಗುಂಪುಗಳಾಗಿ ವಿಂಗಡೆನೆ ಮಾಡಿ ಅದರಲ್ಲಿ ಉತ್ತಮ ಪ್ರದರ್ಶನ ನೀಡುವ 8 ತಂಡಗಳನ್ನು ಮಾತ್ರ ಮುಂದಿನ ತಿಂಗಳು ರಾಜ್ಯ ಸರ್ಕಾರದ ವತಿಯಿಂದ ಮಂಗಳೂರು, ಉಡುಪಿಯಲ್ಲಿ ನಡೆಸಲ್ಪಡುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕಳುಹಿಸಿ ಕೊಡುವ ಉದ್ದೇಶವನ್ನು ಹೊಂದಿದೆ. ಅದರಲ್ಲಿ 


ರಾಯಚೂರು ತಂಡವು ಮಂಡ್ಯ ಮತ್ತು ಚಾಮರಾಜ ನಗರ ತಂಡವನ್ನು ಇನ್ನಿಂಗ್ಸ್ ಅಂತರದಲ್ಲಿ ಸೋಲಿಸಿ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು