5:30 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಶಿಕ್ಷಕರಾಗುವ ಕಾತರದಲ್ಲಿದ್ದ ಸಿಆರ್‌ಪಿ , ಬಿಆರ್‌ಪಿಗಳಿಗೆ ನಿರಾಸೆ: ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು; ಶಿಕ್ಷಕರ ಸಂಘ ಆಕ್ಷೇಪ

09/12/2021, 10:46

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com 

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಡಿ .೬ ರಂದು ನಡೆಯಬೇಕಾಗಿದ್ದ ( ಸಿಆರ್‌ಪಿ ) ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ ಹಾಗೂ ( ಬಿಆರ್‌ಪಿ ) ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ನೇತೃತ್ವದಲ್ಲಿ ಡಿಡಿಪಿಐ ಅವರಿಗೆ ಮನವಿ ಸಲ್ಲಿಸಲಾಯಿತು . 

ಈ ಸಂಬಂಧ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಅವರಿಗೆ ಮನವಿ ಸಲ್ಲಿಸಿದ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್ ಮತ್ತಿತರರು , ಇಲಾಖೆಯೇ ೩ ಮತ್ತು ೫ ವರ್ಷ ಮುಗಿಸಿದ ೩೯ ಮಂದಿ ಸಿಆರ್‌ಪಿ ಹಾಗೂ ಬಿಆರ್‌ಪಿಗಳು ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದರು ಎಂದು ತಿಳಿಸಿದರು .

ಇಲಾಖೆ ಸೂಚನೆಯಂತೆಯೇ ಕೋರಿಕೆ ವರ್ಗಾವಣೆ ಬಯಸಿ ಸ್ವಇಚ್ಚಾ ಅರ್ಜಿ ಸಲ್ಲಿಸಿದ್ದರೂ ಇದೀಗ ವರ್ಗಾವಣೆ ಸ್ಥಳ ಆಯ್ಕೆ ಪ್ರಕ್ರಿಯೆ ಶೇ .೭ ಮೀರುವಂತಿಲ್ಲ ಎಂಬ ನೆಪವೊಡ್ಡಿ ಕೌನ್ಸಿಲಿಂಗ್‌ ಅನ್ನು ಇಲಾಖೆ ರದ್ದು ಮಾಡಿದೆ ಎಂದು ದೂರಿದರು . 

ಕೋಲಾರ ಜಿಲ್ಲೆಯಲ್ಲಿ ಕೋರಿಕೆ ವರ್ಗಾವಣೆ ಮಿತಿ ಈಗಾಗಲೇ ಶೇಕಡ ೭ % ಹುದ್ದೆಗಳಿಗೆ ಲಾಕ್ ಆಗಿದೆ . ಸ್ಥಳ ಆಯ್ಕೆ ಪ್ರಕ್ರಿಯೆ ಶೇಕಡ ೭ % ಮೀರುವಂತಿಲ್ಲ ಎಂದು ಇಂದಿನ ಕೌನ್ಸಿಲಿಂಗ್ ಅನ್ನು ರದ್ದು ಮಾಡುವ ಮೂಲಕ ಸ್ಥಳ ಆಯ್ಕೆ ಆಸೆಯೊಂದಿಗೆ ಹಾಜರಾಗಿದ್ದ ಸಿಆರ್‌ಪಿ , ಬಿಆರ್‌ಪಿಗಳು ತೊಂದರೆಗೊಳಗಾಗಿದ್ದಾರೆ ಎಂದು ತಿಳಿಸಿದರು . 

ನಮಗೆ ಇಲಾಖೆ ನಿಯಮದಂತೆ ಸಿಆರ್‌ಪಿ.ಬಿಆರ್‌ಪಿ ಅವಧಿ ಮುಗಿದಿರುವುದರಿಂದ ನಮಗಾಗಿರುವ ಅನ್ಯಾಯವನ್ನು ಪರಿಗಣಿಸಿ ಅತಿ ಶೀಘ್ರದಲ್ಲೇ ನಮಗೆ ಕೌನ್ಸಿಲಿಂಗ್ ನೀಡಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಲು ಅನುಕೂಲ ಮಾಡಿಕೊಡುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಡಿಡಿಪಿಐ ಅವರಿಗೆ ಮನವಿ ಮಾಡಿದರು .

ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ರಡ್ಡಪ್ಪ , ಮಾಲೂರು ತಾಲ್ಲೂಕು ಅಧ್ಯಕ್ಷ ನರಸಿಂಹ , ಕಾರ್ಯದರ್ಶಿ ಮುನಿರಾಜು , ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ವೆಂಕಟಗಿರಿಯಪ್ಪ , ಕೆಜಿಎಫ್ ತಾಲ್ಲೂಕು ಅಧ್ಯಕ್ಷವಿನೋದ್ ಬಾಬು , ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ಬೈರಾರೆಡ್ಡಿ , ಕಾರ್ಯದರ್ಶಿ ಶಿವಣ್ಣ ಮುಂತಾದ ಪದಾಧಿಕಾರಿಗಳು ಕೌನ್ಸಿಲಿಂಗ್ ಬಯಸಿ ಬಂದ ಸಿಆರ್‌ಪಿ ಮತ್ತು ಬಿಆರ್‌ಪಿಗಳೊಂದಿಗೆ ಹಾಜರಿದ್ದು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು