5:09 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಿಕ್ಷಕರಾಗುವ ಕಾತರದಲ್ಲಿದ್ದ ಸಿಆರ್‌ಪಿ , ಬಿಆರ್‌ಪಿಗಳಿಗೆ ನಿರಾಸೆ: ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು; ಶಿಕ್ಷಕರ ಸಂಘ ಆಕ್ಷೇಪ

09/12/2021, 10:46

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com 

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಡಿ .೬ ರಂದು ನಡೆಯಬೇಕಾಗಿದ್ದ ( ಸಿಆರ್‌ಪಿ ) ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ ಹಾಗೂ ( ಬಿಆರ್‌ಪಿ ) ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ನೇತೃತ್ವದಲ್ಲಿ ಡಿಡಿಪಿಐ ಅವರಿಗೆ ಮನವಿ ಸಲ್ಲಿಸಲಾಯಿತು . 

ಈ ಸಂಬಂಧ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಅವರಿಗೆ ಮನವಿ ಸಲ್ಲಿಸಿದ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್ ಮತ್ತಿತರರು , ಇಲಾಖೆಯೇ ೩ ಮತ್ತು ೫ ವರ್ಷ ಮುಗಿಸಿದ ೩೯ ಮಂದಿ ಸಿಆರ್‌ಪಿ ಹಾಗೂ ಬಿಆರ್‌ಪಿಗಳು ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದರು ಎಂದು ತಿಳಿಸಿದರು .

ಇಲಾಖೆ ಸೂಚನೆಯಂತೆಯೇ ಕೋರಿಕೆ ವರ್ಗಾವಣೆ ಬಯಸಿ ಸ್ವಇಚ್ಚಾ ಅರ್ಜಿ ಸಲ್ಲಿಸಿದ್ದರೂ ಇದೀಗ ವರ್ಗಾವಣೆ ಸ್ಥಳ ಆಯ್ಕೆ ಪ್ರಕ್ರಿಯೆ ಶೇ .೭ ಮೀರುವಂತಿಲ್ಲ ಎಂಬ ನೆಪವೊಡ್ಡಿ ಕೌನ್ಸಿಲಿಂಗ್‌ ಅನ್ನು ಇಲಾಖೆ ರದ್ದು ಮಾಡಿದೆ ಎಂದು ದೂರಿದರು . 

ಕೋಲಾರ ಜಿಲ್ಲೆಯಲ್ಲಿ ಕೋರಿಕೆ ವರ್ಗಾವಣೆ ಮಿತಿ ಈಗಾಗಲೇ ಶೇಕಡ ೭ % ಹುದ್ದೆಗಳಿಗೆ ಲಾಕ್ ಆಗಿದೆ . ಸ್ಥಳ ಆಯ್ಕೆ ಪ್ರಕ್ರಿಯೆ ಶೇಕಡ ೭ % ಮೀರುವಂತಿಲ್ಲ ಎಂದು ಇಂದಿನ ಕೌನ್ಸಿಲಿಂಗ್ ಅನ್ನು ರದ್ದು ಮಾಡುವ ಮೂಲಕ ಸ್ಥಳ ಆಯ್ಕೆ ಆಸೆಯೊಂದಿಗೆ ಹಾಜರಾಗಿದ್ದ ಸಿಆರ್‌ಪಿ , ಬಿಆರ್‌ಪಿಗಳು ತೊಂದರೆಗೊಳಗಾಗಿದ್ದಾರೆ ಎಂದು ತಿಳಿಸಿದರು . 

ನಮಗೆ ಇಲಾಖೆ ನಿಯಮದಂತೆ ಸಿಆರ್‌ಪಿ.ಬಿಆರ್‌ಪಿ ಅವಧಿ ಮುಗಿದಿರುವುದರಿಂದ ನಮಗಾಗಿರುವ ಅನ್ಯಾಯವನ್ನು ಪರಿಗಣಿಸಿ ಅತಿ ಶೀಘ್ರದಲ್ಲೇ ನಮಗೆ ಕೌನ್ಸಿಲಿಂಗ್ ನೀಡಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಲು ಅನುಕೂಲ ಮಾಡಿಕೊಡುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಡಿಡಿಪಿಐ ಅವರಿಗೆ ಮನವಿ ಮಾಡಿದರು .

ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ರಡ್ಡಪ್ಪ , ಮಾಲೂರು ತಾಲ್ಲೂಕು ಅಧ್ಯಕ್ಷ ನರಸಿಂಹ , ಕಾರ್ಯದರ್ಶಿ ಮುನಿರಾಜು , ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ವೆಂಕಟಗಿರಿಯಪ್ಪ , ಕೆಜಿಎಫ್ ತಾಲ್ಲೂಕು ಅಧ್ಯಕ್ಷವಿನೋದ್ ಬಾಬು , ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ಬೈರಾರೆಡ್ಡಿ , ಕಾರ್ಯದರ್ಶಿ ಶಿವಣ್ಣ ಮುಂತಾದ ಪದಾಧಿಕಾರಿಗಳು ಕೌನ್ಸಿಲಿಂಗ್ ಬಯಸಿ ಬಂದ ಸಿಆರ್‌ಪಿ ಮತ್ತು ಬಿಆರ್‌ಪಿಗಳೊಂದಿಗೆ ಹಾಜರಿದ್ದು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು