2:13 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಶಿಕ್ಷಕರಾಗುವ ಕಾತರದಲ್ಲಿದ್ದ ಸಿಆರ್‌ಪಿ , ಬಿಆರ್‌ಪಿಗಳಿಗೆ ನಿರಾಸೆ: ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು; ಶಿಕ್ಷಕರ ಸಂಘ ಆಕ್ಷೇಪ

09/12/2021, 10:46

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com 

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಡಿ .೬ ರಂದು ನಡೆಯಬೇಕಾಗಿದ್ದ ( ಸಿಆರ್‌ಪಿ ) ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ ಹಾಗೂ ( ಬಿಆರ್‌ಪಿ ) ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ನೇತೃತ್ವದಲ್ಲಿ ಡಿಡಿಪಿಐ ಅವರಿಗೆ ಮನವಿ ಸಲ್ಲಿಸಲಾಯಿತು . 

ಈ ಸಂಬಂಧ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಅವರಿಗೆ ಮನವಿ ಸಲ್ಲಿಸಿದ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್ ಮತ್ತಿತರರು , ಇಲಾಖೆಯೇ ೩ ಮತ್ತು ೫ ವರ್ಷ ಮುಗಿಸಿದ ೩೯ ಮಂದಿ ಸಿಆರ್‌ಪಿ ಹಾಗೂ ಬಿಆರ್‌ಪಿಗಳು ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದರು ಎಂದು ತಿಳಿಸಿದರು .

ಇಲಾಖೆ ಸೂಚನೆಯಂತೆಯೇ ಕೋರಿಕೆ ವರ್ಗಾವಣೆ ಬಯಸಿ ಸ್ವಇಚ್ಚಾ ಅರ್ಜಿ ಸಲ್ಲಿಸಿದ್ದರೂ ಇದೀಗ ವರ್ಗಾವಣೆ ಸ್ಥಳ ಆಯ್ಕೆ ಪ್ರಕ್ರಿಯೆ ಶೇ .೭ ಮೀರುವಂತಿಲ್ಲ ಎಂಬ ನೆಪವೊಡ್ಡಿ ಕೌನ್ಸಿಲಿಂಗ್‌ ಅನ್ನು ಇಲಾಖೆ ರದ್ದು ಮಾಡಿದೆ ಎಂದು ದೂರಿದರು . 

ಕೋಲಾರ ಜಿಲ್ಲೆಯಲ್ಲಿ ಕೋರಿಕೆ ವರ್ಗಾವಣೆ ಮಿತಿ ಈಗಾಗಲೇ ಶೇಕಡ ೭ % ಹುದ್ದೆಗಳಿಗೆ ಲಾಕ್ ಆಗಿದೆ . ಸ್ಥಳ ಆಯ್ಕೆ ಪ್ರಕ್ರಿಯೆ ಶೇಕಡ ೭ % ಮೀರುವಂತಿಲ್ಲ ಎಂದು ಇಂದಿನ ಕೌನ್ಸಿಲಿಂಗ್ ಅನ್ನು ರದ್ದು ಮಾಡುವ ಮೂಲಕ ಸ್ಥಳ ಆಯ್ಕೆ ಆಸೆಯೊಂದಿಗೆ ಹಾಜರಾಗಿದ್ದ ಸಿಆರ್‌ಪಿ , ಬಿಆರ್‌ಪಿಗಳು ತೊಂದರೆಗೊಳಗಾಗಿದ್ದಾರೆ ಎಂದು ತಿಳಿಸಿದರು . 

ನಮಗೆ ಇಲಾಖೆ ನಿಯಮದಂತೆ ಸಿಆರ್‌ಪಿ.ಬಿಆರ್‌ಪಿ ಅವಧಿ ಮುಗಿದಿರುವುದರಿಂದ ನಮಗಾಗಿರುವ ಅನ್ಯಾಯವನ್ನು ಪರಿಗಣಿಸಿ ಅತಿ ಶೀಘ್ರದಲ್ಲೇ ನಮಗೆ ಕೌನ್ಸಿಲಿಂಗ್ ನೀಡಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಲು ಅನುಕೂಲ ಮಾಡಿಕೊಡುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಡಿಡಿಪಿಐ ಅವರಿಗೆ ಮನವಿ ಮಾಡಿದರು .

ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ರಡ್ಡಪ್ಪ , ಮಾಲೂರು ತಾಲ್ಲೂಕು ಅಧ್ಯಕ್ಷ ನರಸಿಂಹ , ಕಾರ್ಯದರ್ಶಿ ಮುನಿರಾಜು , ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ವೆಂಕಟಗಿರಿಯಪ್ಪ , ಕೆಜಿಎಫ್ ತಾಲ್ಲೂಕು ಅಧ್ಯಕ್ಷವಿನೋದ್ ಬಾಬು , ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ಬೈರಾರೆಡ್ಡಿ , ಕಾರ್ಯದರ್ಶಿ ಶಿವಣ್ಣ ಮುಂತಾದ ಪದಾಧಿಕಾರಿಗಳು ಕೌನ್ಸಿಲಿಂಗ್ ಬಯಸಿ ಬಂದ ಸಿಆರ್‌ಪಿ ಮತ್ತು ಬಿಆರ್‌ಪಿಗಳೊಂದಿಗೆ ಹಾಜರಿದ್ದು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು