8:14 AM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ !

09/12/2021, 18:55

ಕಾರ್ಕಳ(reporterkarnataka.com) : ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನಲ್ಲಿ ಮಡಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಅವರು ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಆಗಿದ್ದಾರೆ.

ಹರ್ಜಿಂದರ್ ಸಿಂಗ್ ಅವರು ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಮದುವೆಯಾಗಿದ್ದರು. ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಮರಣವನ್ನಪ್ಪಿದ  

ಹರ್ಜಿಂದರ್ ಸಿಂಗ್ ಅವರು ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಪ್ರೇಮ ವಿವಾಹ ಆಗಿದ್ದರು.

ಕಾರ್ಕಳ ಸಾಲ್ಮರದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಪುತ್ರಿಯಾದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಸದ್ಯ ಸೇನೆಯಲ್ಲಿ ಇಂಡಿಯನ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

ಮದುವೆಯಾದ ಬಳಿಕ ತಂದೆ- ತಾಯಿ ನೆಲೆಸಿದ್ದ ಸಾಲ್ಮರಕ್ಕೆ ದಂಪತಿ ಹಲವು ಬಾರಿ ಭೇಟಿ ನೀಡಿದ್ದರು. ರಜೆ ಸಂದರ್ಭಗಳಲ್ಲಿ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಊರಿಗೆ ಬಂದು ಹೋಗುತ್ತಿದ್ದರು. ಆಗ್ನೆಸ್ ಪ್ರಫುಲ್ಲ ಅವರ ತಾಯಿ ಮೇರಿ ಮಿನೇಜಸ್ ಈಗಲೂ ಸಾಲ್ಮರದಲ್ಲಿಯೇ ವಾಸವಿದ್ದಾರೆ. ನಿನ್ನೆ

ಹೆಲಿಕಾಪ್ಟರ್ ದುರಂತ ವಿಷಯ ತಿಳಿಯುತ್ತಿದ್ದಂತೆ, ಮನೆಯಲ್ಲಿ ಸ್ಮಶಾನ ಮೌನ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು