8:55 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ: ಡಾ. ನಾಗರತ್ನ ಕೆ.ಎ

10/12/2021, 07:58

ಮಂಗಳೂರು(reporterkarnataka.com): ಪದುವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾಯೋಜನೆ ಘಟಕ ಹಾಗೂ ಉದ್ಘಾಟನಾ ಸಮಾರಂಭ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಮಾಜದಲ್ಲಿ ಹೇಗೆ ಬದುಕ ಬೇಕು ಅನ್ನುವುದನ್ನು ರಾ.ಸೆ.ಯೋ. ತಿಳಿಸಿಕೊಡುತ್ತದೆ. 
ನಿಮ್ಮ ನಿಮ್ಮ ಮನೆಗಳಲ್ಲಿ ಸಸಿ ನೆಡುವ ಕಾರ್ಯ ಮಾಡಿ. ಅದು ಕೂಡ ನೀವು  ಸಮಾಜಕ್ಕೆ ಕೊಡುವ ಕೊಡುಗೆಯಾಗಿದೆ. ನಿಮ್ಮ ಪರಿಸರ ಸ್ವಚ್ಛಗೊಳಿಸಿ , ಅದೇ ಸೇವೆ ಎಂದು ಅವರ ಹೇಳಿದರು.ನಂತರ ರಾ.ಸೆ.ಯೋ ಪ್ರತಿಜ್ಞಾ ವಿಧಿ ಬೋಧಿಸಿದರು.




ಇನೋರ್ವ ಅತಿಥಿ ಆಂಕರ್ ವಿ.ಜೆ.ಡಿಕ್ಷನ್ ಮಾತನಾಡಿ, ರಾ. ಸೆ.ಯೋ ಒಂದು  ಅದ್ಬುತ ವೇದಿಕೆ.ಇದನ್ನು ಕಾಲೇಜು ದಿನಗಳಲ್ಲಿ ಉತ್ತಮವಾಗಿ ಬಳಸಿಕೊಳ್ಳಿ. ಕಾಲೇಜು ಜೀವನವನ್ನು  ಮನೋರಂಜಿಸುವ ಜತೆಗೆ ಜವಾಬ್ದಾರಿಯುತವಾಗಿ ಪರಿಗಣಿಸಿ ಒಳ್ಳೆಯ ಜೀವನವನ್ನು ರೂಪಿಸಿಕೊಳ್ಳಿ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಂಜನ್  ವಿ. ಎನ್. ವಹಿಸಿದ್ದರು. 


ಕಾರ್ಯಕ್ರಮದಲ್ಲಿ ಕೋವಿಡ್ ವಾರ್ ರೂಮ್ ನಲ್ಲಿ ಕಾರ್ಯನಿರ್ವಹಿಸಿದ ಸ್ವಯಂ ಸೇವಕರನ್ನು ಅಭಿನಂದಿಸಲಾಯಿತು. ರಾ.ಸೆ.ಯೋ ಯೋಜನಾಧಿಕಾರಿ, ಪ್ರೊ. ರೋಶನ್ ಸಾಂತುಮೆರ್, ರಾಹುಲ್ ಮತ್ತು ರೇಷ್ಮಾ  ಉಪಸ್ಥಿತರಿದ್ದರು.




ಸ್ವಯಂ ಸೇವಕರಾದ ತನುಶ್ರೀ ನಿರೂಪಿಸಿ,ಬ್ಲಾನಿ ಡಿಸೋಜ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು