5:09 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಸ್ತೆ ವಿವಾದ: ಪಕ್ಕದ ಮನೆಯವರ ಕಿರುಕುಳ, ಬೆದರಿಕೆಗೆ ಮನನೊಂದು ವ್ಯಕ್ತಿ ಆತ್ಮಹತ್ಯೆ

10/12/2021, 14:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಗೆ ತೆರಳಲು ರಸ್ತೆ ನಿರ್ಮಿಸುವ ವಿಚಾರದಲ್ಲಿ ಪಕ್ಕದವರು ನೀಡುತ್ತಿದ್ದ ಕಿರುಕುಳ ತಾಳಲಾರದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ .

ಗೋಣಿಬೀಡು ಹೋಬಳಿ ಕಸ್ಕೆಬೈಲು ವಾಸಿ ಆನಂದ (57) ಇತ್ತೀಚೆಗೆ ಮನೆ ಬಿಟ್ಟು ಹೋಗಿದ್ದು ಅವರ ಶವ  ಹಿಂದೂ ರುದ್ರಭೂಮಿಯಲ್ಲಿ ಪತ್ತೆಯಾಗಿದೆ .

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು , ಇದಕ್ಕೆ ಅಶೋಕ ಮತ್ತು ಯಶೋಧ ನೀಡುತ್ತಿದ್ದ ಮಾನಸಿಕ ಕಿರುಕುಳ, ಹಲ್ಲೆ ಬೆದರಿಕೆಗಳೇ ಕಾರಣ ಎಂದು ಮೃತನ ಪುತ್ರ ಅಂಕಿತ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ತಮ್ಮ ಮನೆಗೆ ತಿರುಗಾಡಲು ರಸ್ತೆ ಇಲ್ಲದಿದ್ದು , ಹಿಂಬದಿಯ ಸರ್ಕಾರಿ ಜಾಗದಲ್ಲಿ ರಸ್ತೆ ಬಿಡಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು ಎನ್ನಲಾಗಿದೆ .

ಈ ಮಧ್ಯೆ ಸರ್ಕಾರಿ ಭೂಮಿಯಲ್ಲಿ ಹಿಡುವಳಿ ಮಾಡಿಕೊಂಡಿರುವ ಅಶೋಕ್ ಮತ್ತವರ ಪತ್ನಿ  ,ತಮ್ಮ ತಂದೆ ತಾಯಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ .

ಪದೇ ಪದೇ ನೀಡುತ್ತಿದ್ದ ಕಿರುಕುಳ ಹಲ್ಲೆ ಬೆದರಿಕೆಯಿಂದ ಬೇಸತ್ತ ತಮ್ಮ ತಂದೆ ಮಾನಸಿಕ ವೇದನೆ ಅನುಭವಿಸುತ್ತಿದ್ದು ಆತ್ಮಹತ್ಯೆಗೆ ಇದೇ ಕಾರಣ ಎಂದು ಉಲ್ಲೇಖಿಸಿದ್ದಾರೆ . ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು