5:30 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ನಾಯಿ ಕಚ್ಚಿದರೆ ಸರಕಾರಿ ಆಸ್ಪತ್ರೆಯಲ್ಲಿ ಇಲ್ಲ ಇಂಜೆಕ್ಷನ್ !: ಹೊಣೆಗೇಡಿ ಆರೋಗ್ಯಾಧಿಕಾರಿ

10/12/2021, 14:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ 

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ,ಡಿ. 9ರಂದು ರಾತ್ರಿ  ಡಿ.ನಾಗರಾಜ ಎಂಬ ವ್ಯಕ್ತಿಯೋರ್ವರಿಗೆ ನಾಯಿ ಕಚ್ಚಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಧಾವಿಸಿದ ಅವರು ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ನೀಡುವ ಇಂಜಕ್ಷನ್ ಲಭ್ಯವಿಲ್ಲದೆ ಪರದಾಡಿದ ಘಟನೆ ನಡೆದಿದೆ.


ಈ ಕುರಿತು ಡಿ. ನಾಗರಾಜ ಎಂಬವರು ದೂರಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಲಸಿಕೆ ಇಲ್ಲದೆ ಸೂಕ್ತ ಚಿಕಿತ್ಸೆ ಸಿಗದೇ ಗಾಯಾಳು ಡಿ.ನಾಗರಾಜ ತೀವ್ರ ಪರದಾಡಿದ್ದಾರೆ. ಅವರು ಮಾತನಾಡಿ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ರೋಗಿಗಳನ್ನು ಗಮನಿಸುವಲ್ಲಿ ನಿರ್ಲಕ್ಷ್ಯ ಧೋರಣೆ ತಾಳುತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಣೆಗೇಡಿ ಆರೋಗ್ಯಾಧಿಕಾರಿ ಹಾಗೂ ಪಪಂ ಅಧಿಕಾರಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದೆ ಅಗತ್ಯ ಲಸಿಕೆಗಳು ಅಲಭ್ಯವಾಗಿದ್ದು ಹೆಸರಿಗಷ್ಟೇ ಸಾರ್ವಜನಿಕ ಆಸ್ಪತ್ರೆ ಎನಿಸಿದೆ. ಈ ಮೂಲಕ ಆರೋಗ್ಯಾಧಿಕಾರಿ ತಮ್ಮ ಹೊಣೆಗೆಡಿತನಕ್ಕೆ ಸಾಕ್ಷಿಯಾಗಿದ್ದಾರೆ. ಪಟ್ಟಣದಲ್ಲಿ ನಿರಂತರ ಬೀದಿನಾಯಿಗಳ ಹಾವಳಿ ಮತ್ತು ದಾಳಿ ಜರುಗುತ್ತಿದ್ದು,ಪಪಂ ಅಧಿಕಾರಿ ಸೂಕ್ತ ಕ್ರಮ ಜರುಗಿಸದೇ ತಮ್ಮ ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರೆ. ಈ ಎರಡೂ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು, ಸರ್ಕಾರಿ ಸಂಬಳ ತಿಂದು ಸಾರ್ವಜನಿಕರ ನೋವಿಗೆ ಸ್ಪಂದಿಸುತ್ತಿಲ್ಲ. ಈ ಮೂಲಕ ಹೊಣೆಗೇಡಿತನದ ಅಧಿಕಾರಿಗಳಾಗಿದ್ದಾರೆಂದು ಪಟ್ಟಣದ ನಾಗರೀಕರು ಕೆಲ ಸಂಘಟನೆಗಳ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಸಿದ್ದಾರೆ. ನಾಯಿ ಹಾಗೂ ಹಾವು ಕಡಿತಕ್ಕೆ ಲಸಿಕೆಗಳಿಲ್ಲ, ಸಿಬ್ಬಂದಿ ರೋಗಿಗಳಿಗೆ ಸಕಾಲಕ್ಕೆ ಸೂಕ್ತ ವಾಗಿ ಚಿಕಿತ್ಸೆ ನೀಡುತ್ತಿಲ್ಲ. ಲಕ್ಷಗಟ್ಟಲೆ ಸರ್ಕಾರಿ ಸಂಬಳ ತಿನ್ನೋ ಕೆಲ ವೈದ್ಯರು ಸಾರ್ವಜನಿಕ ಸೇವೆ ಮಾಡುತ್ತಿಲ್ಲ. ಬದಲ‍‍ಾಗಿ ಗುಂಪುಗಾರಿಕೆ ಮತ್ತು ರಾಜಕೀಯ ಮಾಡುತ್ತಾ, ಕೇವಲ ಪ್ರಭಾವಿಗಳ ಜೀತದಾಳಿನಂತೆ ವರ್ತಿಸುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಸಿದ್ದಾರೆ. ಪ್ರತಿಯೊಂದು ಚಿಕಿತ್ಸೆಯ  ಸಾಮ‍ಾಗ್ರಿಗಳನ್ನು ಹೊರಗಡೆ ತರಿಸುತ್ತಿದ್ದಾರೆ. ಮಾತೆತ್ತಿದರೆ ಬಳ್ಳಾರಿ, ದಾವಣಗೆರೆಗೆ ಕಳುಹಿಸಿ ಕೈತೊಳೆದುಕೊಳ್ಳುತ್ತಿದ್ದಾರೆ. ಸಿಬ್ಬಂದಿ ಸಕಾಲಕ್ಕೆ ರೋಗಿಗಳಿಗೆ ನೀಡುತ್ತಿಲ್ಲ. ಎಲ್ಲದಕ್ಕೂ ಬಳ್ಳಾರಿಗೆ ಕಳುಹಿಸುವ ಇವರು, ಇಲ್ಲಿ ಏಕೆ ಇರಬೇಕು ಎಂದು ನಾಗರಾಜ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಪ್ರೆಶ್ನಸಿದ್ದಾರೆ.  ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕ್ರಮ ಜರುಗಿಸಬೇಕು: ಆರೋಗ್ಯ ಇಲಾಖೆಯ ಕೆಲವು ಅಧಿಕಾರಿಗಳು, ಕೆಲವು ಸಿಬ್ಬಂದಿಗಳು ಹತ್ತಾರು ವರ್ಷಗಳಿಂದ  ತಮ್ಮ ಬೇರು ಬಿಟ್ಟಿದ್ದಾರೆ,ಕಾರಣ ಜಿಲ್ಲಾಧಿಕಾರಿಗಳು ಪರಿಶೀಲಸಿ ಜನಹಿತಕ್ಕಾಗಿ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ಹಲವು ಸಂಘಟನೆಗಳ ಪದಾಧಿಕಾರಿಗಳು, ನಾಗರೀಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು