1:15 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ

10/12/2021, 17:23

ಮಂಗಳೂರು:(reporterkarnataka.com): ಪ್ರೀತಿ ನಿರಾಕರಿಸಿದಳೆಂದು ತನ್ನ ಸಹಪಾಠಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬಜೆ ಪೊಲೀಸರು ಬಂಧಿಸಿದ್ದಾರೆ.

ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜೊತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ ಅಬೂಬಕರ್ ಸಿದ್ದಿಕ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಒಂದು ವೇಳೆ ಪ್ರೀತಿಗೆ ನಿರಾಕರಿಸಿದಲ್ಲಿ ಇಬ್ಬರೂ ಜೊತೆಯಾಗಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ.

ಅಬೂಬಕರ್ ಸಿದ್ದಿಕ್ ಎಷ್ಟೇ ಪೀಡಿಸಿ, ಬೆದರಿಸಿದರೂ ಯುವತಿ ಪ್ರೀತಿಗೆ ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿ.8 ರಂದು ಯುವತಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿ ಬಂದ ಆರೋಪಿ, ಆಕೆಯ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರು ದಾಖಲಿಸಿಕೊಂಡಿರುವ ಬಜಪೆ ಪೋಲಿಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು