5:45 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

28 ವರ್ಷ ಹಳೆಯ ನಕಲಿ ಅಂಕಪಟ್ಟಿ ಪ್ರಕರಣ: ಅಯೋಧ್ಯೆ ಬಿಜೆಪಿ ಶಾಸಕ ಅನರ್ಹ; 5 ವರ್ಷ ಜೈಲು

12/12/2021, 11:50

ಲಕ್ನೋ(reporterkarnataka.com): ಅಯೋಧ್ಯೆಯ
ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕ ಪಟ್ಟಿ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿ ಜೈಲು ಶಿಕ್ಷೆ ವಿಧಿಸಿದೆ.

ಇಂದ್ರ ಪ್ರತಾಪ್ ಅವರಿಗೆ 8 ಸಾವಿರ ರೂ. ದಂಡದ ಜೊತೆಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಧೀಶೆ ಪೂಜಾ ಸಿಂಗ್ ಅವರು ತೀರ್ಪು ನೀಡಿದ್ದಾರೆ.

ಇದು 28 ವರ್ಷಗಳ ಹಳೆಯ ಪ್ರಕರಣವಾಗಿದ್ದು,ತಿವಾರಿ ಅವರ 5 ವರ್ಷಗಳ ಶಾಸಕ ಸ್ಥಾನದ ಅಧಿಕಾರಾವಧಿ ಇನ್ನು ಕೆಲವೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಅದಕ್ಕೆ ಮುನ್ನವೇ ತೀರ್ಪು ಪ್ರಕಟವಾಗಿದೆ.

ತಿವಾರಿ ವಿರುದ್ಧ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ 1991ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಿವಾರಿ ಅವರು ಮೊದಲ ವರ್ಷದ ನಕಲಿ ಅಂಕಪಟ್ಟಿ ತಯಾರಿಸಿ ಬಿಎಸ್ಸಿ ಎರಡನೇ ವರ್ಷಕ್ಕೆ ಪ್ರವೇಶ ಪಡೆದಿದ್ದರು ಎಂದು ಪ್ರಿನ್ಸಿಪಾಲ್ ಯದುವಂಶ್ ರಾಮ್ ತ್ರಿಪಾಠಿ ಆರೋಪಿಸಿ ದೂರು ದಾಖಲಿಸಿದ್ದರು. ಪ್ರಕರಣದ ಕುರಿತು 28 ವರ್ಷಗಳ ಕಾಲ ದೀರ್ಘ ವಿಚಾರಣೆ ನಡೆದಿತ್ತು. ಈ ನಡುವೆ ಪ್ರಿನ್ಸಿಪಾಲ್ ತ್ರಿಪಾಠಿ ಸಾವನ್ನಪ್ಪಿದ್ದರು.

……

ಇತ್ತೀಚಿನ ಸುದ್ದಿ

ಜಾಹೀರಾತು