5:40 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಆಸೆ, ಆಮಿಷೆಯೊಡ್ಡಿ ಮತಾಂತರ ಮಾಡಲು ಅವಕಾಶ ಕೊಡೊಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

12/12/2021, 13:21

ಹುಬ್ಬಳ್ಳಿ(reporterkarnataka. com): ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಹಾಗಾಗಿ ಆಸೆ ಆಮಿಷೆಯೊಡ್ಡಿ ಮತಾಂತರ ಆಗುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯದ ನಾಯಕರ ಜತೆ ಮಾತುಕತೆ ನಡೆಸಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು. 

ಮತಾಂತರ ನಿಷೇಧ ಕಾಯಿದೆ ಚರ್ಚೆಗೆ ಮುನ್ನ ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿಯು ಕಾನೂನು ಇಲಾಖೆಯ ಸಮಿತಿ ಜತೆ ಮತಾಂತರದ ವಿಷಯವಾಗಿ ಸಂಪೂರ್ಣ ಪರಿಶೀಲನೆ ಮಾಡಲಿದೆ. ಸಮಿತಿ ನೀಡುವ ವರದಿ ಸಂಪುಟ ಸಭೆ ಮುಂದೆ ಬರುತ್ತದೆ.

ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ. ನಂತರ ವಿಧಾನಸಭೆಗೆ ಬಂದರೆ ಬೆಳಗಾವಿಯಲ್ಲಿಯೇ ಮತಾಂತರ ಕಾಯಿದೆ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಹ್ಯಾಕ್ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಪ್ರಧಾನಿಗಳು ಟ್ವಿಟರ್ ಹ್ಯಾಕ್ ಕುರಿತು ಮಾತನಾಡಿದ್ದಾರೆ. ಹಾಗಾಗಿ ತಪ್ಪಿತಸ್ಥರನ್ನು ಗುರುತಿಸಲು ಕಾರ್ಯಾಚರಣೆ ಕೂಡ ಮಾಡಲಾಗುತ್ತಿದೆ. ಅದಲ್ಲದೇ ಇಂತಹ ಹ್ಯಾಕ್ ಆಗುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿವೆ. ತಾಂತ್ರಿಕ ಬಲದಿಂದ ಅವುಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಅವರು ನುಡಿದರು. 

ರಾಜ್ಯದಲ್ಲಿ ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ಹೆಚ್ಚಿಸಲಾಗುವುದು, ಈಗಾಗಲೇ ಒಂದು ಜಿನೋಮಿಕ್ ಸ್ವಿಕ್ವೇನ್ಸ್ ಲ್ಯಾಬ್ ನ್ನು ಹೆಚ್ಚಿಗೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು