1:44 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಆಸೆ, ಆಮಿಷೆಯೊಡ್ಡಿ ಮತಾಂತರ ಮಾಡಲು ಅವಕಾಶ ಕೊಡೊಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

12/12/2021, 13:21

ಹುಬ್ಬಳ್ಳಿ(reporterkarnataka. com): ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಹಾಗಾಗಿ ಆಸೆ ಆಮಿಷೆಯೊಡ್ಡಿ ಮತಾಂತರ ಆಗುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯದ ನಾಯಕರ ಜತೆ ಮಾತುಕತೆ ನಡೆಸಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು. 

ಮತಾಂತರ ನಿಷೇಧ ಕಾಯಿದೆ ಚರ್ಚೆಗೆ ಮುನ್ನ ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿಯು ಕಾನೂನು ಇಲಾಖೆಯ ಸಮಿತಿ ಜತೆ ಮತಾಂತರದ ವಿಷಯವಾಗಿ ಸಂಪೂರ್ಣ ಪರಿಶೀಲನೆ ಮಾಡಲಿದೆ. ಸಮಿತಿ ನೀಡುವ ವರದಿ ಸಂಪುಟ ಸಭೆ ಮುಂದೆ ಬರುತ್ತದೆ.

ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ. ನಂತರ ವಿಧಾನಸಭೆಗೆ ಬಂದರೆ ಬೆಳಗಾವಿಯಲ್ಲಿಯೇ ಮತಾಂತರ ಕಾಯಿದೆ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಹ್ಯಾಕ್ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಪ್ರಧಾನಿಗಳು ಟ್ವಿಟರ್ ಹ್ಯಾಕ್ ಕುರಿತು ಮಾತನಾಡಿದ್ದಾರೆ. ಹಾಗಾಗಿ ತಪ್ಪಿತಸ್ಥರನ್ನು ಗುರುತಿಸಲು ಕಾರ್ಯಾಚರಣೆ ಕೂಡ ಮಾಡಲಾಗುತ್ತಿದೆ. ಅದಲ್ಲದೇ ಇಂತಹ ಹ್ಯಾಕ್ ಆಗುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿವೆ. ತಾಂತ್ರಿಕ ಬಲದಿಂದ ಅವುಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಅವರು ನುಡಿದರು. 

ರಾಜ್ಯದಲ್ಲಿ ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ಹೆಚ್ಚಿಸಲಾಗುವುದು, ಈಗಾಗಲೇ ಒಂದು ಜಿನೋಮಿಕ್ ಸ್ವಿಕ್ವೇನ್ಸ್ ಲ್ಯಾಬ್ ನ್ನು ಹೆಚ್ಚಿಗೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು