9:08 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಆಸೆ, ಆಮಿಷೆಯೊಡ್ಡಿ ಮತಾಂತರ ಮಾಡಲು ಅವಕಾಶ ಕೊಡೊಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

12/12/2021, 13:21

ಹುಬ್ಬಳ್ಳಿ(reporterkarnataka. com): ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಹಾಗಾಗಿ ಆಸೆ ಆಮಿಷೆಯೊಡ್ಡಿ ಮತಾಂತರ ಆಗುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯದ ನಾಯಕರ ಜತೆ ಮಾತುಕತೆ ನಡೆಸಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು. 

ಮತಾಂತರ ನಿಷೇಧ ಕಾಯಿದೆ ಚರ್ಚೆಗೆ ಮುನ್ನ ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿಯು ಕಾನೂನು ಇಲಾಖೆಯ ಸಮಿತಿ ಜತೆ ಮತಾಂತರದ ವಿಷಯವಾಗಿ ಸಂಪೂರ್ಣ ಪರಿಶೀಲನೆ ಮಾಡಲಿದೆ. ಸಮಿತಿ ನೀಡುವ ವರದಿ ಸಂಪುಟ ಸಭೆ ಮುಂದೆ ಬರುತ್ತದೆ.

ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ. ನಂತರ ವಿಧಾನಸಭೆಗೆ ಬಂದರೆ ಬೆಳಗಾವಿಯಲ್ಲಿಯೇ ಮತಾಂತರ ಕಾಯಿದೆ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಹ್ಯಾಕ್ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಪ್ರಧಾನಿಗಳು ಟ್ವಿಟರ್ ಹ್ಯಾಕ್ ಕುರಿತು ಮಾತನಾಡಿದ್ದಾರೆ. ಹಾಗಾಗಿ ತಪ್ಪಿತಸ್ಥರನ್ನು ಗುರುತಿಸಲು ಕಾರ್ಯಾಚರಣೆ ಕೂಡ ಮಾಡಲಾಗುತ್ತಿದೆ. ಅದಲ್ಲದೇ ಇಂತಹ ಹ್ಯಾಕ್ ಆಗುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿವೆ. ತಾಂತ್ರಿಕ ಬಲದಿಂದ ಅವುಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಅವರು ನುಡಿದರು. 

ರಾಜ್ಯದಲ್ಲಿ ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ಹೆಚ್ಚಿಸಲಾಗುವುದು, ಈಗಾಗಲೇ ಒಂದು ಜಿನೋಮಿಕ್ ಸ್ವಿಕ್ವೇನ್ಸ್ ಲ್ಯಾಬ್ ನ್ನು ಹೆಚ್ಚಿಗೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು