6:32 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ವೈದ್ಯರ ನಿರ್ಲಕ್ಷ್ಯ: ಹೆರಿಗೆ ವೇಳೆ ತಾಯಿ-ಮಗು ಸಾವು: ಸಾರ್ವಜನಿಕರಿಂದ ಭಾರಿ ಪ್ರತಿಭಟನೆ

12/12/2021, 13:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದು, ತಾಯಿ ಹೊಟ್ಟೆಯಲ್ಲೇ ಹಸುಗೂಸು ಕೂಡ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ನಡೆದಿದೆ.


ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ನಿವಾಸಿ ಶ್ವೇತಾ (27) ಮೃತ ದುರ್ದೈವಿ. ವೈದ್ಯ ಎಲ್ಡೋಸ್ ಅವರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಇವರು ಎನ್.ಆರ್.ಪುರ, ಶೃಂಗೇರಿಯಲ್ಲಿ ಅಮಾನತ್ತಾಗಿದ್ದ ವೈದ್ಯರು ಎನ್ನಲಾಗಿದೆ.


ಪೋಷಕರು ಗರ್ಭಿಣಿಯನ್ನ ಚಿಕ್ಕಮಗಳೂರಿಗೆ ಕರೆದೊಯ್ಯಲು ಮುಂದಾಗಿದ್ದರು. ಅಷ್ಟರಲ್ಲಿ ವೈದ್ಯರು ನಾನೇ ಹೆರಿಗೆ ಮಾಡಿಸುತ್ತೇನೆಂದು ತಡೆದರು. ಇದೀಗ ವೈದ್ಯರ ನಿರ್ಲಕ್ಷ್ಯದಿಂದ ತಾಯಿ-ಮಗು ಸಾವು ಸಂಭವಿಸಿದೆ ಎಂದು ಸಂಬಂಧಿಕರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.


ವೈದ್ಯರ ವಿರುದ್ಧ ಆಸ್ಪತ್ರೆ ಮುಂಭಾಗ ಸ್ಥಳಿಯರ ಪ್ರತಿಭಟನೆ ನಡೆಸಿದ್ದಾರೆ.


ಆಸ್ಪತ್ರೆಗೆ ಮುತ್ತಿಗೆ ಹಾಕಲು ಸ್ಥಳಿಯರು ಯತ್ನಿಸಿದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು