5:28 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಹೆರಿಗೆ ವೇಳೆ ತಾಯಿ-ಮಗು ಸಾವು; ಪ್ರತಿಭಟನಾಕಾರರ ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ

12/12/2021, 23:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದು, ತಾಯಿ ಹೊಟ್ಟೆಯಲ್ಲೇ ಹಸುಗೂಸು ಕೂಡ ಸಾವನ್ನಪ್ಪಿದ ದಾರುಣ ಘಟನೆಯನ್ನು ವಿರೋಧಿಸಿ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಎದುರು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.


ವೈದ್ಯರ ನಿರ್ಲಕ್ಷ್ಯ ದಿಂದ ಬಾಳೆಹೊನ್ನೂರು ನಿವಾಸಿ ಶ್ವೇತಾ (27) ಎಂಬ ಗರ್ಭಿಣಿ ಯುವತಿ ಮೃತಪಟ್ಟಿದ್ದರು. ಇದನ್ನು ವಿರೋಧಿಸಿ ಮೃತರ ಸಂಬಂಧಿಕರು ಹಾಗೂ ಸ್ಥಳೀಯರು ವೈದ್ಯರನ್ನು ಬಂಧಿಸುವಂತೆ ಆಗ್ರಹಿಸಿ ಪ್ರಾಥಮಿಕ ಆರೋಗ್ಯ ಕೇಂದ್ರ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಒಂದು ಹಂತದಲ್ಲಿ ಪೊಲೀಸ್ ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆದು ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.

ವೈದ್ಯ ಎಲ್ಡೋಸ್ ಅವರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಇವರು ಎನ್.ಆರ್.ಪುರ, ಶೃಂಗೇರಿಯಲ್ಲಿ ಅಮಾನತ್ತಾಗಿದ್ದ ವೈದ್ಯರು ಎನ್ನಲಾಗಿದೆ.

ಪೋಷಕರು ಗರ್ಭಿಣಿಯನ್ನ ಚಿಕ್ಕಮಗಳೂರಿಗೆ ಕರೆದೊಯ್ಯಲು ಮುಂದಾಗಿದ್ದರು. ಅಷ್ಟರಲ್ಲಿ ವೈದ್ಯರು ನಾನೇ ಹೆರಿಗೆ ಮಾಡಿಸುತ್ತೇನೆಂದು ತಡೆದರು. ಇದೀಗ ವೈದ್ಯರ ನಿರ್ಲಕ್ಷ್ಯದಿಂದ ತಾಯಿ-ಮಗು ಸಾವು ಸಂಭವಿಸಿದೆ ಎಂದು ಸಂಬಂಧಿಕರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು