6:32 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕಾರ್ಕಳದಲ್ಲಿ ಹಿಂದೂ ಸಂಗಮ: ಗೋಮಾತೆ ರಕ್ಷಣೆಯ ದೀಕ್ಷೆ

13/12/2021, 08:06

ಕಾರ್ಕಳ(reporterkarnataka.com):
ಕಾರ್ಕಳ ವಿಶ್ವ ಹಿಂದೂ  ಪರಿಷತ್ ಹಾಗೂ ಭಜರಂಗದಳ ಉಡುಪಿ ಇದರ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಕಾರ್ಕಳ ದ ಗಾಂಧಿ ಮೈದಾನದ ಅಮರ ಸೇನಾನಿ ಜನರಲ್ ಬಿಪಿನ್ ರಾವತ್ ವೇದಿಕೆ ಯಲ್ಲಿ ನಡೆಯಿತು.

ಗೌರಿ ಗದ್ದೆ ದತ್ತಾಶ್ರಮದ ವಿನಯ ಗುರೂಜಿ ಮಾತನಾಡಿ, ದೇಹವನ್ನು ಶಿಲೆಯಾಗಿ ನಾಮಧೇಯ ವಾಗಿ , ಧರ್ಮದ ವಿರುದ್ದ ಮಾತನಾಡುವುದು ಧರ್ಮಯುದ್ದವಾದೃ ಕೇಸರಿ ಸನಾತನ ಧರ್ಮ ಹೊಂದಿರುವ ಸಂಕೇತ, ಸೃಷ್ಟಿ ಸರಿದೂಗಲು ಹಿಂದೂ ಧರ್ಮ ಉಳಿಯಲು  , ಧರ್ಮ ಪ್ರಜ್ಞೆ ನಿಡುವ ಪ್ರವೃತ್ತಿ ಬಾಲ್ಯದಲ್ಲೇ ಅಗಬೇಕು. ನಾಮ ಭಜನೆ ,ರಾಮ ಭಜನೆಯಾಗಲಿ , ಕಲಿ ಕಲ್ಮಶ ತೊಳೆಯುವ ಕಾರ್ಕಳ ವಾಗಲಿ, ನಮ್ಮೂರೆ ನಮಗೆ ತೀರ್ಥ ಕ್ಷೇತ್ರ ವಾಗಬೇಕು .ಅಗಲೆ ಧರ್ಮದ ಉಳಿಸಲು ಸಾಧ್ಯ ಎಂದರು.

ಗೋಮಾತೆ ವಿರುದ್ಧ ಹೋರಾಡುವ ಭಜರಂಗದಳದ ಭಕ್ತರ ಮೇಲಿನ ಕೇಸನ್ನುರದ್ದುಗೊಳಿಸಲು ಸಹಿ ಸಂಗ್ರಹ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಿದ್ದೇನೆ ,ದತ್ತ  ನಿಧಿಗೆ 50000 ನಿಧಿಯನ್ನು ಪ್ರಕಟಿಸಿದರು 

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, ದೇಶದ ಸಂಸ್ಕೃತಿಯನ್ನು ರಕ್ಷಿಸುತ್ತಿರುವ ಸಂಘ ಕಾರ್ಯಕರ್ತರ  ಅನನ್ಯ ಸೇವೆಯಿಂದ ತಲೆ ಎತ್ತಿ ಬಾಳುತಿದ್ದೆವೆ. ಶ್ರದ್ದಾ ಕೇಂದ್ರ ಗಳ ರಕ್ಷಣೆ ಗೆ ಗೋ ಮಾತೆಯ ರಕ್ಷಣೆಗೆ ಕಾನೂನಿನ ಚೌಕಟ್ಟಿನಲ್ಲಿ ರಕ್ಷಣೆ ಮಾಡೋಣ .ಕಾನೂನನ್ನು ಕೈಗೆತ್ತಿಕೊಳ್ಳಬೆಡಿ ಎಂದರು ಕಿವಿ‌ಮಾತು ಹೇಳಿದರು.

ಮನೆಯಲ್ಲಿರುವ ಮಕ್ಕಳಿಗೆ ಉತ್ತಮ ಸಂಸ್ಕೃತಿ ಶಿಕ್ಷಣ ನೀಡೊಣ , ಸ್ಪೂರ್ತಿ   ತುಂಬುವ  ,ನಮ್ಮ ಸಂಸ್ಕೃತಿ ಯ ಗೌರವಿಸುವ ಸರಕಾರ ವನ್ನು ನಾವು ಚುನಾಯಿಸಬೇಕು ಎಂದರು .

ಸಾದ್ವಿ ಸರಸ್ವತಿ ದಿಕ್ಸೂಚಿ ಭಾಷಣ ಮಾಡಿ  ಕರ್ನಾಟಕದಲ್ಲಿ ಹಿಂದು ಕಾರ್ಯಕರ್ತರ  ತ್ಯಾಗವಿದೆಯೋ ಅಲ್ಲಿಯವರೆಗು  ನಶಿಸಿ ಹೋಗದು  , ಟಿಪ್ಪು ಸುಲ್ತಾನ್ ಪೂಜಿಸುವ ಮನಸ್ಸುಗಳಿಗೆ ಧಿಕ್ಕರಿಸಿ, ಅಯೊದ್ಯದಲ್ಲಿ ರಾಮಮಂದಿರ ನಿರ್ಮಾಣ ವಾಗಿದೆ. ರಾಜ್ಯದಲ್ಲಿ  ಪ್ರಖರತೆಯ ಮತಾಂತರ ,ಲವ್ ಜಿಹಾದ್ ,ಗೋರಕ್ಷಣಾ   ಜಾರಿಗೆ ತನ್ನಿ ಎಂದು ಸರಕಾರ ವನ್ನು ಒತ್ತಾಯಿಸಿದರು.

ಗೋರಕ್ಷಣೆಗಾಗಿ ಮನೆಯಲ್ಲಿ ಖಡ್ಗವನ್ನು ಇಟ್ಟು. ಗೊಮಾತೆಯನ್ನು ರಕ್ಷಿಸಿ  ಗೊಮಾತೆಯನ್ನು ಪೂಜಿಸಿ.ಭಾರತೀಯ 

ಮಕ್ಕಳಿಗೆ ಭಗವದ್ಗೀತೆ ಬೋದಿಸಬೆಕು, ಸಂಸ್ಕೃತಿ ಯ ಪಾಠವೆ  ಮೊದಲಾಗಬೇಕು.

ಆನೆಗೊಂದಿ ಮಠದ  ಕಾಳಹಸ್ತೆಂದ್ರ ಸ್ವಾಮೀಜಿ ಮಾತನಾಡಿ  ದೇಶದಲ್ಲಿ ಸಂತರು ಶಾಂತಿ ಯನ್ನು ಹಂಚಿದವರು, ಆದರೆ ದೇಶದೊಳಗಿನ ದುಷ್ಟ ಶಕ್ತಿ ಗಳೆ, ಮತಾಂತರ ಭಯೋತ್ಪಾದನೆ ಹಿಮ್ಮೆಟ್ಟಿಸಬೆಕು. ಧರ್ಮಾಧರಿತ ಕಾನೂನು, ಸಮಾನ ಕಾನೂನು ಸಂಹಿತೆ ಜಾತಮರಿಗೆ ತರಬೇಕು. 

ಕರ್ನಾಟಕ ವಿಶ್ವ ಹಿಂದೂ ಪರಿಷತ್  ನ ಎಂ.ಬಿ ಪುರಾಣಿಕ್, ಬೋಳ ಶ್ರಿನಿವಾಸ ಕಾಮತ್ ,ಕಡ್ತಲ ವಿಶ್ವ ನಾಥ ಪೂಜಾರಿ , ಸುವೃತ್ ಕುಮಾರ್ ,ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನ ಹಿರ್ಗಾನದ  ಮೊಕ್ತೇಸರ ಅಶೋಕ್ ನಾಯಕ್ ಹಿರ್ಗಾನ, ಮಹೇಶ್ ಶೆಟ್ಟಿ ಕುಡುಪುಲಾಜೆ ,ಶರತ್ ಹೆಗ್ಡೆ ಬೆಲ್ಮಣ್ಣು ಸುಂದರ್ ಬಿ ಹೊಸ್ಮಾರು , ಸುನೀಲ್ ಕೆ.ಆರ್ ,  ಭುಜಂಗ ಕುಲಾಲ್ , ಸುರೇಖ ರಾಜ್ , ವಿಷ್ಣುಮೂರ್ತಿ ಆಚಾರ್ಯ, ಸುರೇಂದ್ರ ಕೋಟೇಶ್ವರ ಉಪಸ್ಥಿತರಿದ್ದರು.ಚೇತನ್ ಪೆರಲ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು