11:54 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರು: ಶ್ರೀ ವೀರವೆಂಕಟೇಶ ದೇವರ ಪಾಕ ಶಾಲೆ ನವೀಕೃತ ‘ಅನ್ನಪೂರ್ಣೆ’ ಉದ್ಘಾಟನೆ        

13/12/2021, 20:26

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಿತು.

ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ ಮೊಕ್ಕಾಂ ನಿಂದ ಆಗಮಿಸಿದ್ದು, ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು. ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ ಜನವರಿ ೨೫ ರಂದು ನಡೆಯಲಿರುವ ಶ್ರೀ ದೇವರ ಪುನಃ ಪ್ರತಿಷ್ಠಾ ದಶಮಾನೋತ್ಸವ ಹಾಗೂ ನೂತನ ಬ್ರಹ್ಮ ರಥ ಸಮರ್ಪಣೆ ನಡೆಯಲಿರುವುದರಿಂದ ಶ್ರೀಗಳವರಿಂದ ಪ್ರಾರ್ಥನೆ ನಡೆದು ಪ್ರಸಾದ ನೀಡಿದರು. ನಂತರ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ )ಯ ಉದ್ಘಾಟನಾ ಸಮಾರಂಭ ಶ್ರೀಗಳವರಿಂದ ದೀಪ ಪ್ರಜ್ವಲನೆಯ ಮುಖೇನ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ , ಕೊಡುಗೈ ದಾನಿ ರಾಮದಾಸ್ ಕಾಮತ್ , ವೆಂಕಟೇಶ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು