8:47 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ಮಂಗಳೂರು: ಶ್ರೀ ವೀರವೆಂಕಟೇಶ ದೇವರ ಪಾಕ ಶಾಲೆ ನವೀಕೃತ ‘ಅನ್ನಪೂರ್ಣೆ’ ಉದ್ಘಾಟನೆ        

13/12/2021, 20:26

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಿತು.

ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ ಮೊಕ್ಕಾಂ ನಿಂದ ಆಗಮಿಸಿದ್ದು, ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು. ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ ಜನವರಿ ೨೫ ರಂದು ನಡೆಯಲಿರುವ ಶ್ರೀ ದೇವರ ಪುನಃ ಪ್ರತಿಷ್ಠಾ ದಶಮಾನೋತ್ಸವ ಹಾಗೂ ನೂತನ ಬ್ರಹ್ಮ ರಥ ಸಮರ್ಪಣೆ ನಡೆಯಲಿರುವುದರಿಂದ ಶ್ರೀಗಳವರಿಂದ ಪ್ರಾರ್ಥನೆ ನಡೆದು ಪ್ರಸಾದ ನೀಡಿದರು. ನಂತರ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ )ಯ ಉದ್ಘಾಟನಾ ಸಮಾರಂಭ ಶ್ರೀಗಳವರಿಂದ ದೀಪ ಪ್ರಜ್ವಲನೆಯ ಮುಖೇನ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ , ಕೊಡುಗೈ ದಾನಿ ರಾಮದಾಸ್ ಕಾಮತ್ , ವೆಂಕಟೇಶ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು