8:34 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ; ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ 6 ಮತಗಳಿಂದ ಗೆಲುವು

14/12/2021, 14:12

ಚಿಕ್ಕಮಗಳೂರು(reporterkarnataka.com): ಚಿಕ್ಕಮಗಳೂರು ವಿಧಾನ ಪರಿಷತ್ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನ ಜಿದ್ದಾಜಿದ್ದಿಯ ಹೋರಾಟದಲ್ಲಿ ಕೊನೆ ಘಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಕೇವಲ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಮೊದಲ ಸುತ್ತಿನಿಂದ ಇಬ್ಬರೂ ಅಭ್ಯರ್ಥಿಗಳ ಮಧ್ಯೆ ಅತ್ಯಂತ ಪೈಪೋಟಿ ಏರ್ಪಟಿದ್ದು, ಅಂತಿಮವಾಗಿ ಆರು ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರಾಭವಗೊಂಡರು.

2410 ಮತಗಳ ಪೈಕಿ 39 ಮತಗಳು ಅಸಿಂಧುಗೊಂಡಿತ್ತು. ಎಂ.ಕೆ ಪ್ರಾಣೇಶ 1188 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 1182 ಮತಗಳನ್ನು ಪಡೆದುಕೊಂಡರು.

ಕಾಂಗ್ರೆಸ್ ಅಭ್ಯರ್ಥಿ ಆರು ಮತಗಳಿಂದ ಪರಭವಗೊಂಡಿದ್ದರಿಂದ ಚುನಾವಣಾ ಅಧಿಕಾರಿಗಳ ಬಳಿ ಮರು ಮತ ಎಣಿಕೆಗೆ ಮನವಿ ಮಾಡಿದ್ದಾರೆ. ಆದರೆ ಅಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮರು ಮತ ಎಣಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು