7:10 AM Friday28 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ

15/12/2021, 13:23

Reporterkarnataka.com
ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂ‍ಪ್ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

‘ಡಿಸೆಂಬರ್‌ 8ರ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ಶೌರ್ಯವಂತ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ನಮ್ಮನ್ನು ಅಗಲಿದ್ದಾರೆ. ಇಂದು ಬೆಳಿಗ್ಗೆ ಅವರು ನಿಧನರಾದರು… ‘ ಎಂದು ಭಾರತೀಯ ವಾಯು ಪಡೆ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್‌ ದುರಂತದಲ್ಲಿ ವರುಣ್ ಸಿಂಗ್‌ ಗಂಭೀರವಾಗಿ ಗಾಯಗೊಂಡಿದ್ದರು.

ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್‌ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿತ್ತು.

ಹೆಲಿಕಾಪ್ಟರ್‌ ಅವಘಡದಲ್ಲಿ ಸಿಡಿಎಸ್‌ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು